ಬಸವರಾಜ ಬೊಮ್ಮಾಯಿ 
ರಾಜಕೀಯ

'ಮಹಾ' ರಾಜಕೀಯ ಬಿಕ್ಕಟ್ಟು, ರಾಷ್ಟ್ರಪತಿ ಚುನಾವಣೆ: ವರಿಷ್ಠರ ಭೇಟಿ ಸಾಧ್ಯವಾಗದೆ ಸಿಎಂ ಬೊಮ್ಮಾಯಿ ವಾಪಸ್

ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ದೆಹಲಿ: ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿ ಸಹಿ ಹಾಕಲು ಪಕ್ಷದ ಎಲ್ಲ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಆ ಕೆಲಸಕ್ಕೆ ಬಂದಿದ್ದೇನೆ. ಜತೆಗೆ ಯಾವುದೇ ಕೇಂದ್ರ ಸಚಿವರನ್ನು ಭೇಟಿ ಮಾಡುವುದಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಾಗ ನಾನೇ ಅದನ್ನು ಅಧಿಕೃತವಾಗಿ ಹೇಳುತ್ತೇನೆ ಎಂದರು ಕೇಂದ್ರದ ಬಿಜೆಪಿ ನಾಯಕರು ಮಹಾರಾಷ್ಟ್ರ ವಿದ್ಯಮಾನಗಳ ಬಗ್ಗೆ ಬ್ಯುಸಿ ಇರುವ ಕಾರಣ ಯಾರನ್ನೂ ಭೇಟಿ ಮಾಡಲಿಲ್ಲ ಎಂದು ತಿಳಿದು ಬಂದಿದೆ.

'ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಈ ರೀತಿ ಮಾಧ್ಯಮಗಳಲ್ಲಿ ಸುದ್ದಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ' ಎಂದರು.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದರು. "ಪಕ್ಷದ ಹೈಕಮಾಂಡ್ ರಾಷ್ಟ್ರಪತಿ ಚುನಾವಣೆಯಲ್ಲಿ ನಿರತವಾಗಿರುವುದರಿಂದ  ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಇದು ಒಂದು ಸಂದರ್ಭವಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT