ಸಿದ್ದರಾಮಯ್ಯ 
ರಾಜಕೀಯ

ಮೋಹನ್ ಭಾಗವತ್ ಸ್ಥಾನಕ್ಕೆ ಆರ್ ಎಸ್ ಎಸ್ ಮಹಿಳೆ ನೇಮಕ ಮಾಡಲಿ: ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿಯಾಗಬೇಕು; ಸಿದ್ದರಾಮಯ್ಯ

ಭ್ರಷ್ಟಾಚಾರದಿಂದ ಗಳಿಸಿರುವ ಹಣ ಬಳಸಿಕೊಂಡು ಬಿಜೆಪಿ ಪಕ್ಷವು ವಿವಿಧ ರಾಜ್ಯಗಳಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗುವ ಬೆಳವಣಿಗೆ.

ಮೈಸೂರು: ಭ್ರಷ್ಟಾಚಾರದಿಂದ ಗಳಿಸಿರುವ ಹಣ ಬಳಸಿಕೊಂಡು ಬಿಜೆಪಿ ಪಕ್ಷವು ವಿವಿಧ ರಾಜ್ಯಗಳಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗುವ ಬೆಳವಣಿಗೆ. ಕರ್ನಾಟಕದ ಬಿಜೆಪಿಯ ಚಾಳಿ ಇಡೀ ದೇಶಕ್ಕೆ ಹಬ್ಬಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದ ಮೂಲಕ ಆಪರೇಷನ್‌ ಕಮಲಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ.  ಇದನ್ನು ತಡೆಗಟ್ಟಲು ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಒಂದು ಪಕ್ಷದಿಂದ ಆಯ್ಕೆಯಾದವನು ಬೇರೆ ಸ್ಥಾನಕ್ಕೆ ಹೋಗದಂತೆ ತಡೆಯಬೇಕು. ಹೋದರೆ 10 ವರ್ಷ ಆತ ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು.

ಪ್ರಜಾಪ್ರಭುತ್ವದ ಉಳಿವಿಗೆ ಇದರ ಅವಶ್ಯಕತೆ ಇದೆ. ಆಪರೇಷನ್‌ ಕಮಲ ಹುಟ್ಟು ಹಾಕಿದ್ದೇ ಬಿಜೆಪಿಯವರು. 2008ರಲ್ಲಿ ಯಡಿಯೂರಪ್ಪ ಮೊದಲ ಆಪರೇಷನ್‌ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಎಲ್ಲಾ ಕಡೆ ಹಣ ಕೊಟ್ಟು ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ ಎಂದು ಗಂಭೀರವಾಗಿ ಟೀಕಿಸಿದರು.

ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಏನು ಮಾಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಡಬಲ್‌ ಎಂಜಿನ್‌ ಸರ್ಕಾರ ಎಂದಿದ್ದಾರೆ. ಈ ಸರ್ಕಾರ ಏನು ಮಾಡಿದೆ? ಅಭಿವೃದ್ಧಿ ಕಾರ್ಯದ ಪಟ್ಟಿ ಕೊಡಿ ಎಂದ ಅವರು, ಸುಮ್ಮನೇ ಸುಳ್ಳು ಹೇಳಿ ಮೋದಿ ಹೋಗಿದ್ದಾರೆ. ರಾಜ್ಯ ಸರ್ಕಾರವು ತನ್ನ ಬೇಡಿಕೆಗಳ ಕುರಿತಾದ ಮನವಿಯನ್ನೂ ಪ್ರಧಾನಿಗೆ ನೀಡಿಲ್ಲ. ಏಕೆಂದರೆ ಮೋದಿ ಏನೂ ಮಾಡುವುದಿಲ್ಲ ಎಂಬುದು ರಾಜ್ಯ ನಾಯಕರಿಗೆ ಗೊತ್ತಿದೆ. ಅದಕ್ಕೆ ಅವರು ಯಾವುದೇ ಮನವಿ ನೀಡಿಲ್ಲ. ಮೋದಿ ಭೇಟಿ ಹಿನ್ನೆಲೆಯಲ್ಲಿ .25 ಕೋಟಿ ಖರ್ಚಾಗಿದೆ. ಆದರೆ ರಸ್ತೆ ಆಗಿರುವುದನ್ನು ಬಿಟ್ಟರೆ ಜನರಿಗೆ ಹೆಚ್ಚು ಲಾಭವಿಲ್ಲ ಎಂದರು.

ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಮೈತ್ರಿಕೂಟವು ಬುಡಕಟ್ಟು ಮಹಿಳೆಯನ್ನು ಆಯ್ಕೆ ಮಾಡಿರುವುದು ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ. ಹಾಗೆ ಸಾಮಾಜಿಕ ನ್ಯಾಯ ನೀಡಬೇಕು ಎಂಬುದಿದ್ದರೆ ಆರ್‌ಎಸ್‌ಎಸ್‌ನ ಮುಖ್ಯ ಸಂಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್‌ ಭಾಗವತ್‌ ಅವರ ಸ್ಥಾನಕ್ಕೆ ಇಂತಹ ಮಹಿಳೆಯನ್ನು ನೇಮಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT