ಬಿ.ಸಿ ನಾಗೇಶ್ 
ರಾಜಕೀಯ

ಮಕ್ಕಳಿಗೆ ಬೈಸಿಕಲ್, ಮೊಟ್ಟೆ ನೀಡಲು ಹಣವಿಲ್ಲದವರಿಗೆ ಶಿಕ್ಷಣ ಸಚಿವರ ಜಾಲತಾಣ ನಿರ್ವಹಣೆಗೆ ಎಲ್ಲಿಂದ ಬಂತು ಹಣ?

ವೈಯಕ್ತಿಕ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಬೆಂಗಳೂರು: ವೈಯಕ್ತಿಕ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಬಿಜೆಪಿಯ ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್,  ಬಡವರಿಗೆ ಅಕ್ಕಿ ನೀಡಲು ಹಣವಿಲ್ಲ ಎನ್ನುತ್ತಾರೆ. ಮಕ್ಕಳಿಗೆ ಬೈಸಿಕಲ್ ಒದಗಿಸಲು, ಮೊಟ್ಟೆ ನೀಡಲು ಹಣವಿಲ್ಲ ಎನ್ನುತ್ತಾರೆ ಮುಖ್ಯಮಂತ್ರಿಗಳು. ಶಿಕ್ಷಣ ಸಚಿವರು ತಮ್ಮ ಖಾಸಗಿ ಸಾಮಾಜಿಕ ಜಾಲತಾಣ ನಿರ್ವಹಿಸಲು ಲಕ್ಷಾಂತರ ಹಣ ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಾರೆ ಎಂದು 'ಕೂ' ಮಾಡಿದ್ದಾರೆ.

ಬಿಜೆಪಿ ಮಾನ ಮರ್ಯಾದೆ ಬಿಟ್ಟಿದೆ ಎಂದು ಹೇಳಿರುವ ಕಾಂಗ್ರೆಸ್ ಒಂದು ವರ್ಷದವರೆಗೆ ಸುಮಾರು ೧೧, ೩೨, ೦೦೦ ರೂ. ಖರ್ಚು ಮಾಡಿದೆ. ಅಂದರೆ ತಿಂಗಳಿಗೆ ೯೪,೪೦೦ ರೂ. ಹಣ ಖರ್ಚು ಮಾಡಿದ್ದಾರೆ ಎಂದು ಹೇಳಿದೆ.

ಪರಿಷ್ಕೃತ ಪಠ್ಯಪುಸ್ತಕಗಳನ್ನು ಸಮರ್ಥಿಸುತ್ತಿದ್ದ ಸರ್ಕಾರ ಮತ್ತೊಮ್ಮೆ ಲೋಪ ಸರಿಪಡಿಸಿದ ಮತ್ತೊಂದು ಹೆಚ್ಚುವರಿ ಪುಸ್ತಕ ಹಂಚುತ್ತೇವೆ ಎಂದಿರುವುದು ತುಘಲಕ್ ದರ್ಬಾರಿನಂತಿದೆ! ಇಂತದ್ದೊಂದು ನಾಚಿಕೆಗೇಡಿನ ಬೆಳವಣಿಗೆಗೆ ಸಿಎಂ ತಲೆತಗ್ಗಿಸಿ ಕ್ಷಮೆ ಕೇಳಬೇಕು, ಶಿಕ್ಷಣ ಸಚಿವರು ರಾಜೀನಾಮೆ ಕೊಟ್ಟು ಹೊರಡಬೇಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT