ಬಿ.ಸಿ ನಾಗೇಶ್ 
ರಾಜಕೀಯ

ಮಕ್ಕಳಿಗೆ ಬೈಸಿಕಲ್, ಮೊಟ್ಟೆ ನೀಡಲು ಹಣವಿಲ್ಲದವರಿಗೆ ಶಿಕ್ಷಣ ಸಚಿವರ ಜಾಲತಾಣ ನಿರ್ವಹಣೆಗೆ ಎಲ್ಲಿಂದ ಬಂತು ಹಣ?

ವೈಯಕ್ತಿಕ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಬೆಂಗಳೂರು: ವೈಯಕ್ತಿಕ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಬಿಜೆಪಿಯ ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್,  ಬಡವರಿಗೆ ಅಕ್ಕಿ ನೀಡಲು ಹಣವಿಲ್ಲ ಎನ್ನುತ್ತಾರೆ. ಮಕ್ಕಳಿಗೆ ಬೈಸಿಕಲ್ ಒದಗಿಸಲು, ಮೊಟ್ಟೆ ನೀಡಲು ಹಣವಿಲ್ಲ ಎನ್ನುತ್ತಾರೆ ಮುಖ್ಯಮಂತ್ರಿಗಳು. ಶಿಕ್ಷಣ ಸಚಿವರು ತಮ್ಮ ಖಾಸಗಿ ಸಾಮಾಜಿಕ ಜಾಲತಾಣ ನಿರ್ವಹಿಸಲು ಲಕ್ಷಾಂತರ ಹಣ ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಾರೆ ಎಂದು 'ಕೂ' ಮಾಡಿದ್ದಾರೆ.

ಬಿಜೆಪಿ ಮಾನ ಮರ್ಯಾದೆ ಬಿಟ್ಟಿದೆ ಎಂದು ಹೇಳಿರುವ ಕಾಂಗ್ರೆಸ್ ಒಂದು ವರ್ಷದವರೆಗೆ ಸುಮಾರು ೧೧, ೩೨, ೦೦೦ ರೂ. ಖರ್ಚು ಮಾಡಿದೆ. ಅಂದರೆ ತಿಂಗಳಿಗೆ ೯೪,೪೦೦ ರೂ. ಹಣ ಖರ್ಚು ಮಾಡಿದ್ದಾರೆ ಎಂದು ಹೇಳಿದೆ.

ಪರಿಷ್ಕೃತ ಪಠ್ಯಪುಸ್ತಕಗಳನ್ನು ಸಮರ್ಥಿಸುತ್ತಿದ್ದ ಸರ್ಕಾರ ಮತ್ತೊಮ್ಮೆ ಲೋಪ ಸರಿಪಡಿಸಿದ ಮತ್ತೊಂದು ಹೆಚ್ಚುವರಿ ಪುಸ್ತಕ ಹಂಚುತ್ತೇವೆ ಎಂದಿರುವುದು ತುಘಲಕ್ ದರ್ಬಾರಿನಂತಿದೆ! ಇಂತದ್ದೊಂದು ನಾಚಿಕೆಗೇಡಿನ ಬೆಳವಣಿಗೆಗೆ ಸಿಎಂ ತಲೆತಗ್ಗಿಸಿ ಕ್ಷಮೆ ಕೇಳಬೇಕು, ಶಿಕ್ಷಣ ಸಚಿವರು ರಾಜೀನಾಮೆ ಕೊಟ್ಟು ಹೊರಡಬೇಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT