ಭವಾನಿ, ಪ್ರಜ್ವಲ್ ಮತ್ತು ಪ್ರೀತಂ ಗೌಡ 
ರಾಜಕೀಯ

ಅನಿತಕ್ಕ ಸುಸಂಸ್ಕೃತೆ: ಭವಾನಿ ಸಂಸ್ಕಾರವಿಲ್ಲದ ಮಹಿಳೆ; ಅಮ್ಮ-ಮಗ ರಾತ್ರಿಯೆಲ್ಲಾ ಫುಲ್ ಟೈಟ್, ಬೆಳಗ್ಗೆ ನಶೆಯಲ್ಲಿ ಮಾತು; ದೊಡ್ಡಗೌಡರ ಸೊಸೆಗೆ 'ಪ್ರೀತಂ' ಟಾಂಗ್

ಬಿಬಿಎಂಪಿಯಲ್ಲಿ ಏನಾದರೂ ನಮ್ ತಂದೆ ಕೆಲಸ ಮಾಡಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರೀತಂ ಗೌಡ ಅವರು ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್​ ರೇವಣ್ಣ ಅವರಿಗೆ ಸವಾಲು ಹಾಕಿದ್ದಾರೆ.

ಹಾಸನ: ಬಿಬಿಎಂಪಿಯಲ್ಲಿ ಏನಾದರೂ ನಮ್ ತಂದೆ ಕೆಲಸ ಮಾಡಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರೀತಂ ಗೌಡ ಅವರು ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್​ ರೇವಣ್ಣ ಅವರಿಗೆ ಸವಾಲು ಹಾಕಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯವರು ತಮ್ಮ ಇಡೀ ವೃತ್ತಿ ಜೀವನದಲ್ಲಿ ಒಂದೇ ಒಂದು ದಿನ ಬಿಬಿಎಂಪಿ ಕೆಲಸ ಮಾಡಿದ್ರೆ, ಅವರು ಶಿಫಾರಸು ಮಾಡಿದ್ದನ್ನು ತೋರಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ನಾನು ಏಕೆ 5ನೇ ಕ್ಲಾಸ್, 7ನೇ ಕ್ಲಾಸ್ ಅಂತಿನಿ ಅನ್ನೋದು ಇದಕ್ಕೆ. ಅವರಿಗೆ ವಿಷಯ, ವಿಚಾರ ಗೊತ್ತಿಲ್ಲದೆ ಮಾತನಾಡುತ್ತಾರೆ ಎಂದರು.

ನಮ್ಮ ತಂದೆ ಒಂದೇ ಒಂದು ದಿನ ಬಿಬಿಎಂಪಿಯಲ್ಲಿ ಕೆಲಸ ಮಾಡಿದ್ದರೆ, ಅದಕ್ಕೆ ಹೆಚ್​ ಡಿ ರೇವಣ್ಣನವರು ಶಿಫಾರಸು ಮಾಡಿದ್ದರೆ, ಇದಕ್ಕೆ ದಾಖಲೆ ನೀಡಲಿ. ನಮ್ಮಕ್ಕ ಭವಾನಿ ರೇವಣ್ಣ ನಶೆ ಪ್ರಭಾವದಿಂದ ಆ ರೀತಿ ನಮ್ಮ ತಂದೆ ಬಗ್ಗೆ ಮಾತನಾಡಿರಬಹುದು ಎಂದು ಟೀಕಿಸಿದರು.

ಅಮ್ಮ ಮಗ ರಾತ್ರಿಯೆಲ್ಲಾ  ಕುಡಿದು ಬೆಳಗ್ಗೆ ಎದ್ದು ಮಾತನಾಡುತ್ತಾರೆ, ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡಬೇಕಾದ ತಾಯಿ ಮಗನ ಜೊತೆ ರಾತ್ರಿ 2 ಗಂಟೆ ವರೆಗೂ ಕುಡಿದು ನಶೆಯಲ್ಲಿ ತೇಲಾಡುತ್ತಾರೆ, ಬೆಳಗ್ಗೆ ಎದ್ದು ನಶೆಯಲ್ಲಿಯೇ ಮಾತನಾಡುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

ಹೆಂಡತಿ ಮಕ್ಕಳನ್ನು ಸಾಕೋಕಾಗ್ತಿಲ್ಲ ಅಂತಾ ಹಳ್ಳಿ ಮೈಸೂರಿನ ಇಂಜಿನಿಯರ್ ನಮ್ಮ ಬಳಿ ಗೋಗರೆದು ಬಿಬಿಎಂಪಿಗೆ ವರ್ಗಾವಣೆ ಮಾಡಿಸಿಕೊಂಡು ಬದುಕು ಕಟ್ಟಿಕೊಂಡ ವ್ಯಕ್ತಿಯ ಮಗ ಈಗ ನಮ್ಮ ಕುಟುಂಬದ ಬಗ್ಗೆ ಮಾತಾಡ್ತಾನೆ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹೇಳಿದ್ದರು. ಭವಾನಿ ರೇವಣ್ಣ ಅವರು ತಮ್ಮ ಹೇಳಿಕೆಗೆ ಸಾಬೀತು ಪಡಿಸಿದರೇ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದ್ದಾರೆ.

ರೇವಣ್ಣ ಅವರು ಮಾತನಾಡಿಲ್ಲ, ಅವರು ಬಹಳ ಸಂಸ್ಕಾರವಂತರು. ದೇವೇಗೌಡರು, ಚನ್ನಮ್ಮ ಅವರಿಗೆ ಸಂಸ್ಕಾರ ಕೊಟ್ಟಿದ್ದಾರೆ. ಇವರಿಗೆ ಸಂಸ್ಕಾರ ಇದೆಯೋ, ಇಲ್ಲವೋ ಗೊತ್ತಿಲ್ಲ. ಸಂಸದರಿಗೆ ಸಂಸ್ಕಾರ ಕಲಿಸಬೇಕಿರುವವರು ತಾಯಿ. ತಾಯಿನೇ ಆ ರೀತಿ ಮಾತನಾಡಿದರೆ ಹೇಗೆ ಎಂದು ಪ್ರಶ್ನಿಸಿದರು.    

ಅನಿತಾ ಅಕ್ಕನನ್ನು ನೋಡಿದರೆ ಎರಡು ಕೈ ಮುಗಿದು ಬನ್ನಿ ಅಕ್ಕ ಅಂತಾ ಕರಿಬೇಕು ಅನಿಸುತ್ತದೆ. ತುಂಬಿದ ಕೊಡ ತುಳುಕುವುದಿಲ್ಲ. ಅನಿತಾ ಅಕ್ಕನ ಬಗ್ಗೆ ಮಾತನಾಡಲು ಆಗುತ್ತದೆಯಾ? ಅವರು ಸಂಸ್ಕಾರವಂತರಿದ್ದಾರೆ. ದೇವೇಗೌಡರು ಮಾಜಿ ಪ್ರಧಾನಿಗಳು, ಅವರ ಸೊಸೆ ನಾನೇ ಮಾಜಿ ಪ್ರಧಾನಿ ಅಂತಾ ತಲೆಯಲ್ಲಿ ಇಟ್ಟುಕೊಂಡಿದ್ದಾರೆ. ಅವರ ಮೊಮ್ಮಗ ನಾನೇ ಮಾಜಿ ಪ್ರಧಾನಿ ಎನ್ನುವ ರೀತಿ ಮಾತನಾಡುತ್ತಾರೆ" ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT