ಸಂಗ್ರಹ ಚಿತ್ರ 
ರಾಜಕೀಯ

ತಮ್ಮದೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಶ್ರೀರಾಮುಲು ಪ್ರತಿಭಟಿಸುವ ಸ್ಥಿತಿ ಒದಗಿದ್ದೇಕೆ?: ಕಾಂಗ್ರೆಸ್ ಪ್ರಶ್ನೆ

ಸಾರಿಗೆ ಸಚಿವ ಬಿ. ಶ್ರೀ ರಾಮುಲು ಅವರಿಗೆ ತಮ್ಮದೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಒದಗಿದ್ದೇಕೆ?' ಎಂದು ಕಾಂಗ್ರೆಸ್ ಬುಧವಾರ ಪ್ರಶ್ನೆ ಮಾಡಿದೆ.

ಬೆಂಗಳೂರು: ಸಾರಿಗೆ ಸಚಿವ ಬಿ. ಶ್ರೀ ರಾಮುಲು ಅವರಿಗೆ ತಮ್ಮದೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಒದಗಿದ್ದೇಕೆ?' ಎಂದು ಕಾಂಗ್ರೆಸ್ ಬುಧವಾರ ಪ್ರಶ್ನೆ ಮಾಡಿದೆ.

ಬಳ್ಳಾರಿಯ ವೇದಾವತಿ ನದಿ ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ಥಿಗಾಗಿ ಒತ್ತಾಯಿಸಿ ಸಚಿವ ಶ್ರೀರಾಮುಲು ಅವರು ರಾತ್ರಿಯಡೀ ಧರಣಿ ನಡೆಸಿದ್ದರು.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

''ತಾವು ಧರಣಿ ನಡೆಸಿದ್ದು ಯಾರ ವಿರುದ್ಧ? ನಿಮ್ಮದೇ ಸರ್ಕಾರದ ವಿರುದ್ಧವೇ? ನಿಮ್ಮದೇ ಸಿಎಂ ವಿರುದ್ಧವೇ? ನಿಮ್ಮದೇ ಪ್ರಧಾನಿ ವಿರುದ್ಧವೇ? ಕ್ಯಾಬಿನೆಟ್ ಸಚಿವರು ತಮ್ಮದೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಒದಗಿದ್ದೇಕೆ? ತಮ್ಮ ಮಾತನ್ನು ಯಾರೂ ಕೇಳ್ತಿಲ್ಲವೇ? ಅಥವಾ ಇದು ಕೇವಲ ತಳ್ಳುವ ಸರ್ಕಾರವೇ?'' ಎಂದು ಕಾಂಗ್ರೆಸ್ ಟೀಕಿಸಿದೆ.

ಇದೇ ವೇಳೆ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ ಕುರಿತು ಟ್ವೀಟ್ ಮಾಡಿ, ಬಿಜೆಪಿಯವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಗೋಳಾಡುತ್ತಿರುವುದು ಯಾರ ವಿರುದ್ಧ? ಗೆಳೆಯನನ್ನು ಬಿಟ್ಟಿರುವ ಶ್ರೀರಾಮುಲು ವಿರುದ್ಧವೇ? ಋಣ ಮರೆತಿರುವ ಯಡಿಯೂರಪ್ಪ ವಿರುದ್ಧವೇ? ಆಪರೇಷನ್ ಕಮಲ ಎಂಬ ಕೊಳಕು ರಾಜಕೀಯಕ್ಕೆ ನಾಂದಿ ಹಾಡಿದವರನ್ನು ತುಳಿದು ಹಾಕಿದ ಬಿಜೆಪಿ ವಿರುದ್ಧವೇ?ಗೋಳಾಡುತ್ತಿರುವುದು ಯಾರ ವಿರುದ್ಧ? ಎಂದು ಪ್ರಶ್ನಿಸಿದೆ.

ರೆಡ್ಡಿ ಬಳಸಿ ಸಿಎಂ ಆದವರೇ ಈಗ ಆತಂತ್ರರಾಗಿದ್ದಾರೆ, ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ ಬಸನಗೌಡ ಪಾಟೀಲ್ ಅವರೇ? ಆಪರೇಷನ್ ಮಾಡಿಸಿದವರು, ಆಪರೇಷನ್ ಮಾಡಿದವರು ಇಬ್ಬರನ್ನೂ ಬಿಜೆಪಿ ಕೆಡವಿ ಹಾಕಿದೆ. ಆಪರೇಷನ್ ಆದವರನ್ನೂ ಕೆಡವಲಿದೆ. ಬಿಜೆಪಿ ಎಂದರೆ ಬಸ್ಮಾಸುರ ಇದ್ದಂತೆ ಯಾರ ತಲೆ ಮೇಲೆ ಕೈ ಬಿದ್ದರೂ ಅವರು ಭಸ್ಮವಾಗುತ್ತಾರೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT