ಭವಾನಿ ರೇವಣ್ಣ-ಪ್ರೀತಂ ಗೌಡ 
ರಾಜಕೀಯ

ಭವಾನಿ ರೇವಣ್ಣ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಪ್ರೀತಂ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಜಿಪಂ ಸದಸ್ಯೆ ಭವಾನಿ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿದೆ.

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಜಿಪಂ ಸದಸ್ಯೆ ಭವಾನಿ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿದೆ. 

ಹೇಮಾವತಿ ಪ್ರತಿಮೆ ವೃತ್ತದಿಂದ ಜೆಡಿಎಸ್ ಕಾರ್ಯಕರ್ತರು ರ್ಯಾಲಿ ಆರಂಭಿಸಿದ್ದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿತು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಜೆಡಿಎಸ್ ಮುಖಂಡ ಹಾಗೂ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಂ.ರಾಜೇಗೌಡ ಮಾತನಾಡಿದ, ಹಾಸನದ ಬಿಜೆಪಿ ಶಾಸಕ ಪ್ರೀತಂ.ಜೆ.ಗೌಡ ಅವರು ಭವಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿರುವ ಅವರು ಹೇಳಿಕೆ ನೀಡುವ ಮುನ್ನ ಎರಡೆರಡು ಬಾರಿ ಯೋಚಿಸಬಹುದಿತ್ತು. ಕ್ಷಮೆ ಯಾಚಿಸಲು ವಿಫಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಶಾಸಕರಿಗೆ ಎಚ್ಚರಿಕೆ ನೀಡಿದರು. 

ಪ್ರೀತಂ ಗೌಡ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ಮಾಜಿ ಶಾಸಕ ಬಿ.ವಿ.ಕರೀಗೌಡ ಅವರು, ಶಾಸಕರು ಸಂಸ್ಕಾರವಿಲ್ಲದ ರಾಜಕಾರಣಿ. ಕೇವಲ ರಾಜಕೀಯ ಲಾಭಕ್ಕಾಗಿ ಜೆಡಿಎಸ್ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವ ಶಾಸಕರ ವರ್ತನೆಯನ್ನು ಸಮಾಜ ಗಮನಿಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಪ್ರೀತಂ ಗೌಡ ಅವರಿಗೆ ತಕ್ಕ ಪಾಠ ಕಲಿಸಲು ಜನತೆ ಕಾಯುತ್ತಿದ್ದಾರೆ ಎಂದರು.

ವಿವಿಧ ತಾಲೂಕುಗಳಿಂದ ನೂರಾರು ಮಹಿಳಾ ಕಾರ್ಮಿಕರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಶಾಸಕರ ವಿರುದ್ಧ ನಿರಂತರವಾಗಿ ಘೋಷಣೆಗಳನ್ನು ಕೂಗಿದ ಜೆಡಿಎಸ್ ಮಹಿಳಾ ಕಾರ್ಯಕರ್ತರು ಶೀಘ್ರ ಕ್ಷಮೆಯಾಚಿಸಲು ವಿಫಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಸನ ತಾಲೂಕು ಜೆಡಿಎಸ್‌ ಅಧ್ಯಕ್ಷ ಎಸ್‌.ದ್ಯಾವೇಗೌಡ, ರಘುಗೌಡ, ಎಚ್‌.ಪಿ.ಸ್ವರೂಪ್‌, ಸೈಯದ್‌ ಅಕ್ಬರ್‌ ಅವರ ಹೇಳಿಕೆಯನ್ನು ಖಂಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

SCROLL FOR NEXT