ಸತೀಶ್ ಜಾರಕಿಹೊಳಿ 
ರಾಜಕೀಯ

ಹಿಂದು ಎಂಬುದು ಅಶ್ಲೀಲ ಪದ: ಹೇಳಿಕೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ

ಹಿಂದು ಎಂಬುದು ಅಶ್ಲೀಲ ಪದ ಎಂಬ ವಿವಾದಾತ್ಮಕ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಳಗಾವಿ: ಹಿಂದು ಎಂಬುದು ಅಶ್ಲೀಲ ಪದ ಎಂಬ ವಿವಾದಾತ್ಮಕ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ತಮ್ಮ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಸತೀಶ್ ಜಾರಕಿಹೊಳಿಯವರು ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದು ಶಬ್ಧದ ಮೇಲೆ ಮಾತನಾಡಿದ್ದೇನೆ. ಈ ಬಗ್ಗೆ ರಾಜ್ಯ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ನಾನು ಭಾಷಣದಲ್ಲಿ ಹೇಳಿದ್ದು ಹಿಂದು ಶಬ್ಧ ಪರ್ಷಿಯನ್ ನಿಂದ ಬಂದಿದೆ ಎಂದು ಹೇಳಿದ್ದು ನಿಜ. ಈ ಬಗ್ಗೆ ಚರ್ಚೆ ಆಗಬೇಕು ಎಂದು ನಾನು ಹೇಳಿದ್ದೇನೆ. ಹಿಂದೂ ಶಬ್ಧದ ಬಗ್ಗೆ ನಿಂದನೆ ಕೆಲವು  ಪದಗಳು ದಾಖಲೆಯಲ್ಲಿ ಸಿಗುತ್ತೆ ಈ ಬಗ್ಗೆ ಕೋಟ್ ಮಾಡಿ‌ ಹೇಳಿದ್ದೇನೆ. ಇದು ಸತೀಶ್ ಜಾರಕಿಹೊಳಿ ವೈಯಕ್ತಿಕ ಹೇಳಿಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದಲ್ಲಿ ಚರ್ಚೆ ಹಿನ್ನೆಲೆ ಸ್ಪಷ್ಟನೆ ನೀಡುವುದು ನನ್ನ ಕರ್ತವ್ಯ. ಜಾತಿ, ಧರ್ಮ ಮೀರಿ ಕೆಲಸ ಮಾಡುವ ಉದ್ದೇಶ ನನ್ನದು. ಪರ್ಷಿಯನ್​​ನಿಂದ ಹಿಂದೂ ಪದ ಬಂದಿದ್ದ ಬಗ್ಗೆ ನೂರಾರು ದಾಖಲೆ ಇವೆ. ಅನೇಕ ಪುಸ್ತಕಗಳಲ್ಲಿ ಈ ಬಗ್ಗೆ ಉಲ್ಲೇಖಗಳು ಇವೆ. ಮಾಧ್ಯಮಗಳು ಉಕ್ರೇನ್, ರಷ್ಯಾ ಯುದ್ಧ ಮಾದರಿಯಲ್ಲಿ ವಿಶ್ಲೇಷಣೆ ಮಾಡುತ್ತಿವೆ. ಈ ಸಮಯ ಬೇರೆ ವಿಷಯಕ್ಕೆ ಕೊಟ್ಟಿದರೇ ಒಳ್ಳೆಯದಾಗುತ್ತಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳು ಅನೇಕ ಸುಳ್ಳುಗಳನ್ನ ವಿಜೃಂಭಣೆ ಮಾಡಿವೆ. ಹಿಂದೂ ಧರ್ಮದ ವಿಚಾರ ಬಂದಾಗ ವಿಶೇಷ ಸ್ಥಾನಮಾನ. ದಯವಿಟ್ಟು ನೈಜ್ಯವಾದ ಸುದ್ದಿ ತೋರಿಸುವ ಪ್ರಯತ್ನ ಮಾಡಿ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ವಿಶೇಷ ಸ್ಥಾನಮಾನ. ದಲಿತ ಮೃತಪಟ್ಟರೇ ಯಾವುದೇ ಸುದ್ದಿ ಇಲ್ಲ. ಹಿಂದೂ ಧರ್ಮದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಕೇಳಬೇಕು. ಹಿಂದೂ ಎಂಬುದು ಜೀವನ ಪದ್ಧತಿ ಎಷ್ಟೇ ಎಂದು ಹೇಳಿದ್ದಾರೆ.

ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಲಾಗಿದೆ. ನಾನೇನು ಯಾರನ್ನು ಅಪಮಾನ ಮಾಡುವ ಉದ್ದೇಶ ಇಲ್ಲ. ಜಾತಿ, ಧರ್ಮದಿಂದ ನಾನು ದೂರ ಇರೋ ವ್ಯಕ್ತಿ. ಈ ರೀತಿ ನಮ್ಮ ಮೇಲೆ ಅಪರಾಧ ಮಾಡಿರೋ ಬಿಂಬಿಸಬೇಡಿ. ವಿದ್ವಾಂಸರನ್ನು ಯಾರಿಗೋ ಲಾಭ ಮಾಡಲು ನೀವು ಚರ್ಚೆ ಮಾಡಬೇಡಿ. ನನ್ನ ಭಾಷಣ ಇನ್ನೂ ಹತ್ತು ಸಲ ನೋಡಿ. ತಪ್ಪಿದ್ರೆ ಚರ್ಚೆ ಮುಂದುವರಿಸಿ ಎಂದು ತಿಳಿಸಿದ್ದಾರೆ.

ಇದೇ ರೀತಿ ಚರ್ಚೆ ಮುಂದುವರಿದರೆ ಮಾನಹಾನಿ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾನು ಯಾವುದೇ ಧರ್ಮ, ಭಾಷೆ ಮಾಡುವ ಪ್ರಶ್ನೆಯೆ ಇಲ್ಲ. ಮೂವತ್ತು ವರ್ಷಗಳಿಂದ ಇದೇ ಕೆಲಸ ಮಾಡುತ್ತೇನೆ. ವಿಕಿಪೀಡಿಯಾದಲ್ಲಿ ಇರೋದು ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT