ಯು.ಬಿ. ಬಣಕಾರ್ 
ರಾಜಕೀಯ

ಬಿಎಸ್ ವೈ ಆಪ್ತ, ಮಾಜಿ ಶಾಸಕ ಯು.ಬಿ. ಬಣಕಾರ್ ಬಿಜೆಪಿಗೆ ರಾಜೀನಾಮೆ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಹಿರೇಕೆರೂರು ಮಾಜಿ ಶಾಸಕ ಬಣಕಾರ್ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಮತ್ತು ರಾಜ್ಯ ಉಗ್ರಾಣ ನಿಮಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಬಣಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಣಕಾರ್ ಅವರನ್ನು ಸಮಾಧಾನಪಡಿಸಲು ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಮಾಡಲಾಗಿತ್ತು. ಆದರೆ, ಇದೀಗ ಬಣಕರ್ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಹಿರೇಕೆರೂರು ಕ್ಷೇತ್ರದ ಎರಡು ಬಾರಿ ಶಾಸಕರಾಗಿದ್ದ ಯು.ಬಿ.ಬಣಕಾರ್​ ಅವರು​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲು ಅನುಭವಿಸಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT