ಹೆಚ್. ಡಿ. ದೇವೇಗೌಡ, ಪ್ರತಿಮೆ ಅನಾವರಣ ಸಮಾರಂಭದ ಚಿತ್ರ 
ರಾಜಕೀಯ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ: ದೇವೇಗೌಡರಿಗೆ ಇಲ್ಲ ಆಹ್ವಾನ, ಜೆಡಿಎಸ್ ತೀವ್ರ ಆಕ್ರೋಶ

ಬೆಂಗಳೂರು ನಗರ ನಿರ್ಮಾತೃ  ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರನ್ನು ಆಹ್ವಾನಿಸದಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರು: ಬೆಂಗಳೂರು ನಗರ ನಿರ್ಮಾತೃ  ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರನ್ನು ಆಹ್ವಾನಿಸದಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ,ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ಹೆಚ್. ಡಿ. ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದೆ. ನಾಡಪ್ರಭು ಪ್ರತಿಮೆ ಸ್ಥಾಪನೆ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಹೆಚ್ ಡಿ ದೇವೇಗೌಡರನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಯಾಕೆ ಆಹ್ವಾನ ಮಾಡಲಿಲ್ಲ ಎಂದು ಪ್ರಶ್ನಿಸಿದೆ.

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ   ಸರಕಾರ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ  ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. 

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ  ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಟೀಕಿಸಿದೆ. 

ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT