ಎಲ್ ಆರ್ ಶಿವರಾಮೇಗೌಡ 
ರಾಜಕೀಯ

ನನ್ನನ್ನು ಮಟ್ಟ ಹಾಕಲು ಹೋಗಿ ನಿಖಿಲ್ ಕುಮಾರಸ್ವಾಮಿಯನ್ನು ಬಲಿಪಶು ಮಾಡಿದ್ರು: ಎಲ್ ಆರ್ ಶಿವರಾಮೇಗೌಡ

ಜಿಲ್ಲೆಯ ಜೆಡಿಎಸ್ ನಾಯಕರು ನನ್ನ ಮಟ್ಟ ಹಾಕಲು ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯದಲ್ಲಿ ಬಲಿಕೊಟ್ಟಿದ್ದಾರೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ  ಬಾಂಬ್ ಸಿಡಿಸಿದ್ದಾರೆ.

ಮಂಡ್ಯ: ಜಿಲ್ಲೆಯ ಜೆಡಿಎಸ್ ನಾಯಕರು ನನ್ನ ಮಟ್ಟ ಹಾಕಲು ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯದಲ್ಲಿ ಬಲಿಕೊಟ್ಟಿದ್ದಾರೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ  ಬಾಂಬ್ ಸಿಡಿಸಿದ್ದಾರೆ.

ನಿಖಿಲ್ ಅವರನ್ನು ಮಂಡ್ಯಗೆ  ತರುವ ಯೋಚನೆ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ಇರಲಿಲ್ಲ. ನನ್ನನ್ನು ತೆಗೆಯಲು ಮಂಡ್ಯ ಜಿಲ್ಲೆಯ ಕೆಲ ಶಾಸಕರು ಏನೇನೋ ಕಥೆ ಕಟ್ಟಿದ್ದರು. 75 ಸಾವಿರ ಮತ ಹಾಕುವುದು ನನ್ನ ಜವಾಬ್ದಾರಿ, ನೀವು ನಿಖಿಲ್ ನಿಲ್ಲಿಸಿ ಎಂದು ಕುಮಾರಸ್ವಾಮಿ ಜೊತೆ ಮಾತುಕಥೆ ಮಾಡಿದ್ದರು.

ನನ್ನನ್ನು ಮಂಡ್ಯ ಜಿಲ್ಲೆಯಲ್ಲಿ ಸೈಡ್ ಲೈನ್ ಮಾಡಲು ಹೋಗಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ನಿಖಿಲ್ ಅವರನ್ನು ಬಲಿ ಕೊಟ್ಟಿದ್ದಾರೆ. ನಿಖಿಲ್‍ಗೆ ತುಂಬಾ ಅವಕಾಶವಿತ್ತು, ಅವರು ಒಳ್ಳೆಯ ಸಿನಿಮಾ ನಟ. ಅವರು ಚುನಾವಣೆಗೆ ನಿಲ್ಲಲು ರೆಡಿ ಇರಲಿಲ್ಲ, ಮಂಡ್ಯ ಜಿಲ್ಲೆಯ ಶಾಸಕರ ಒತ್ತಡದ ಮೇಲೆ ಕುಮಾರಸ್ವಾಮಿ ಅವರು ಚುನಾವಣೆಗೆ ನಿಲ್ಲಿಸಿದರು. ಇದರಿಂದ ಅವರಿಗೆ ಕೆಟ್ಟ ಹೆಸರು ಬಂದಿದೆ ಎಂದಿದ್ದಾರೆ.

ನಾಗಮಂಗಲದಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ನೀಡಲಾಗುತ್ತಿದೆ, ಕೋಟ್ಯಂತರ ರೂಪಾಯಿ ಅಭಿವೃದ್ಧಿ ಹೆಸರಲ್ಲಿ ಲೂಟಿ ಆಗುತ್ತಿದೆ. ಶಾಸಕರು, ಅಧಿಕಾರಿಗಳು ಇದರಲ್ಲಿ ಸಂಪೂರ್ಣವಾಗಿ ಶಾಮೀಲಾಗಿದ್ದಾರೆ. 20 ಲಕ್ಷ ಕೆಲಸ ಆಗಿಲ್ಲ, ಆದ್ರೆ ಒಂದು ಕೋಟಿ ಕಾಮಗಾರಿ ಬಿಲ್ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT