ಡಾ.ಜಿ.ಪರಮೇಶ್ವರ್ ಹಾಗೂ ಹೆಚ್.ಸಿ.ಮಹದೇವಪ್ಪ. 
ರಾಜಕೀಯ

ಕುತೂಹಲ ಕೆರಳಿಸಿದ ಹೆಚ್.ಸಿ.ಮಹದೇವಪ್ಪ-ಡಾ.ಜಿ.ಪರಮೇಶ್ವರ್ ಭೇಟಿ!

ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮೈಸೂರು: ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಂತರ ಪಕ್ಷದ ದಲಿತ ಮುಖಂಡರಿಗೆ ಹೊಸ ಚೇತನ ದೊರೆತಂದಾಗಿದ್ದು, ಖರ್ಗೆಯವರು ಪಕ್ಷದ ಅಧ್ಯಕ್ಷರಾದ ಬಳಿಕ ಇಬ್ಬರು ದಲಿತ ನಾಯಕರು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಇಬ್ಬರೂ ನಾಯಕರು ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಮಾತಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಎಸ್‌ಸಿಗಳೊಳಗಿನ ಎಲ್ಲಾ ಜಾತಿಗಳು ಮತ್ತು ಉಪಜಾತಿಗಳನ್ನು ಒಂದೇ ವೇದಿಕೆಯಡಿ ತರಲು ಎಸ್‌ಸಿ ಸಮಾವೇಶವನ್ನು ನಡೆಸುವ ಕುರಿತಂತೆಯೂ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮಹದೇವಪ್ಪ ಅವರು ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದು, ಪರಮೇಶ್ವರ್ ಅವರನ್ನು ಭೇಟಿ ಮಾಡಿರುವುದು ಇಬ್ಬರೂ ನಾಯಕರು ದಲಿತ ಸಿಎಂ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆಂಯೇ ಎಂಬ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT