ಡಾ.ಜಿ.ಪರಮೇಶ್ವರ್ ಹಾಗೂ ಹೆಚ್.ಸಿ.ಮಹದೇವಪ್ಪ. 
ರಾಜಕೀಯ

ಕುತೂಹಲ ಕೆರಳಿಸಿದ ಹೆಚ್.ಸಿ.ಮಹದೇವಪ್ಪ-ಡಾ.ಜಿ.ಪರಮೇಶ್ವರ್ ಭೇಟಿ!

ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮೈಸೂರು: ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಂತರ ಪಕ್ಷದ ದಲಿತ ಮುಖಂಡರಿಗೆ ಹೊಸ ಚೇತನ ದೊರೆತಂದಾಗಿದ್ದು, ಖರ್ಗೆಯವರು ಪಕ್ಷದ ಅಧ್ಯಕ್ಷರಾದ ಬಳಿಕ ಇಬ್ಬರು ದಲಿತ ನಾಯಕರು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಇಬ್ಬರೂ ನಾಯಕರು ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಮಾತಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಎಸ್‌ಸಿಗಳೊಳಗಿನ ಎಲ್ಲಾ ಜಾತಿಗಳು ಮತ್ತು ಉಪಜಾತಿಗಳನ್ನು ಒಂದೇ ವೇದಿಕೆಯಡಿ ತರಲು ಎಸ್‌ಸಿ ಸಮಾವೇಶವನ್ನು ನಡೆಸುವ ಕುರಿತಂತೆಯೂ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮಹದೇವಪ್ಪ ಅವರು ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದು, ಪರಮೇಶ್ವರ್ ಅವರನ್ನು ಭೇಟಿ ಮಾಡಿರುವುದು ಇಬ್ಬರೂ ನಾಯಕರು ದಲಿತ ಸಿಎಂ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆಂಯೇ ಎಂಬ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!