ಡಾ.ಜಿ.ಪರಮೇಶ್ವರ್ ಹಾಗೂ ಹೆಚ್.ಸಿ.ಮಹದೇವಪ್ಪ. 
ರಾಜಕೀಯ

ಕುತೂಹಲ ಕೆರಳಿಸಿದ ಹೆಚ್.ಸಿ.ಮಹದೇವಪ್ಪ-ಡಾ.ಜಿ.ಪರಮೇಶ್ವರ್ ಭೇಟಿ!

ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮೈಸೂರು: ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಂತರ ಪಕ್ಷದ ದಲಿತ ಮುಖಂಡರಿಗೆ ಹೊಸ ಚೇತನ ದೊರೆತಂದಾಗಿದ್ದು, ಖರ್ಗೆಯವರು ಪಕ್ಷದ ಅಧ್ಯಕ್ಷರಾದ ಬಳಿಕ ಇಬ್ಬರು ದಲಿತ ನಾಯಕರು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಇಬ್ಬರೂ ನಾಯಕರು ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಮಾತಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಎಸ್‌ಸಿಗಳೊಳಗಿನ ಎಲ್ಲಾ ಜಾತಿಗಳು ಮತ್ತು ಉಪಜಾತಿಗಳನ್ನು ಒಂದೇ ವೇದಿಕೆಯಡಿ ತರಲು ಎಸ್‌ಸಿ ಸಮಾವೇಶವನ್ನು ನಡೆಸುವ ಕುರಿತಂತೆಯೂ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮಹದೇವಪ್ಪ ಅವರು ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದು, ಪರಮೇಶ್ವರ್ ಅವರನ್ನು ಭೇಟಿ ಮಾಡಿರುವುದು ಇಬ್ಬರೂ ನಾಯಕರು ದಲಿತ ಸಿಎಂ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆಂಯೇ ಎಂಬ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT