ಸಿದ್ದರಾಮಯ್ಯ 
ರಾಜಕೀಯ

ನಾಮಪತ್ರ ಸಲ್ಲಿಸಲು ಮತ್ತೆ ಬರುತ್ತೇನೆ, ನೀವೆಲ್ಲರೂ ಕಾಂಗ್ರೆಸ್ ಗೆಲ್ಲಿಸಬೇಕು: ಸಿದ್ದರಾಮಯ್ಯ

ಚಿನ್ನದ ನಾಡು ಕೋಲಾರದಲ್ಲಿ ಇಂದು ಭಾನುವಾರ ಮಾಜಿ ಸಿಎಂ ಸಿದ್ದರಾಮಯ್ಯ 2023ರ ಚುನಾವಣಾ ರಂಗ ತಾಲೀಮು ಆರಂಭಿಸಿರುವ ಲಕ್ಷಣ ಕಾಣುತ್ತಿದೆ. ಇಂದು ಬೆಳಗ್ಗೆ ಕೋಲಾರಕ್ಕೆ ತಮ್ಮ ಆಪ್ತರೊಂದಿಗೆ ವಿಶೇಷ ಬಸ್ಸಿನಲ್ಲಿ ಬಂದ ಅವರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಇಂದು ಭಾನುವಾರ ಮಾಜಿ ಸಿಎಂ ಸಿದ್ದರಾಮಯ್ಯ 2023ರ ಚುನಾವಣಾ ರಂಗ ತಾಲೀಮು ಆರಂಭಿಸಿರುವ ಲಕ್ಷಣ ಕಾಣುತ್ತಿದೆ. ಇಂದು ಬೆಳಗ್ಗೆ ಕೋಲಾರಕ್ಕೆ ತಮ್ಮ ಆಪ್ತರೊಂದಿಗೆ ವಿಶೇಷ ಬಸ್ಸಿನಲ್ಲಿ ಬಂದ ಅವರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಕೋಲಾರ ಮೆಥೋಡಿಸ್ಟ್ ಚರ್ಚಿಗೆ ಭೇಟಿ ನೀಡಿದ ನಂತರ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ನಿಮ್ಮ ಅಭಿಮಾನಕ್ಕೆ ನಾನು ಆಭಾರಿಯಾಗಿದ್ದೇನೆ. ನಾನು  5ವರ್ಷ ಈ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದು ಯಾವುದೇ ಒಂದು ಜಾತಿ, ಧರ್ಮದ ಪರವಾಗಿ ಕೆಲಸ ಮಾಡಿರಲಿಲ್ಲ, ಸರ್ವಧರ್ಮಗಳಿಗೂ ನ್ಯಾಯ ಒದಗಿಸಲು ಪ್ರಯತ್ನ ಮಾಡಿದ್ದೇನೆ ಎಂದರು.

ನಾಮಪತ್ರ ಹಾಕಲು ಬರುತ್ತೇನೆ: ಇದೇ ಸಂದರ್ಭದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಪ್ರಯತ್ನಿಸಬೇಕು ಎಂದ ಅವರು ಇವತ್ತು ನಿಮ್ಮೆಲ್ಲರನ್ನು ಭೇಟಿ ಮಾಡಲು ಬಂದಿದ್ದೇನೆ, ಮತ್ತೊಮ್ಮೆ ನಾಮಿನೇಷನ್ ಹಾಕಲು ಬರುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ.

ಬಳಿಕ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ಇನ್ನೂ ನಿರ್ಧಾರ ಮಾಡಿಲ್ಲ, ಎಲೆಕ್ಷನ್ ನಾಮಿನೇಷನ್ ಹಾಕಿ ಬಂದಾಗ ಇನ್ನೊಮ್ಮೆ ಬರುತ್ತೇನೆ ಎಂದು ಹೇಳಿದ್ದು ಎಂದು ಕುತೂಹಲವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT