ಸಾಂದರ್ಭಿಕ ಚಿತ್ರ 
ರಾಜಕೀಯ

ಬಿಜೆಪಿಯ 'ನವಶಕ್ತಿ' ಸಮಾವೇಶಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪ್ಲ್ಯಾನ್!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಡಿದ್ದು ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಠ ಸಮುದಾಯದ ನವಶಕ್ತಿ ಸಮಾವೇಶಕ್ಕೆ ಸಜ್ಜಾಗಿರುವಂತೆಯೇ, ಇದೇ ಅಜೆಂಡಾದೊಂದಿಗೆ ಡಿಸೆಂಬರ್ ನಲ್ಲಿ ಎಸ್ -ಸಿ, ಎಸ್ ಟಿ ಸಮಾವೇಶ ನಡೆಸಲು ಕಾಂಗ್ರೆಸ್ ಯೋಜಿಸಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಡಿದ್ದು ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಠ ಸಮುದಾಯದ ನವಶಕ್ತಿ ಸಮಾವೇಶಕ್ಕೆ ಸಜ್ಜಾಗಿರುವಂತೆಯೇ, ಇದೇ ಅಜೆಂಡಾದೊಂದಿಗೆ ಡಿಸೆಂಬರ್ ನಲ್ಲಿ ಎಸ್ -ಸಿ, ಎಸ್ ಟಿ ಸಮಾವೇಶ ನಡೆಸಲು ಕಾಂಗ್ರೆಸ್ ಯೋಜಿಸಿದೆ.  

ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚಿಗೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮತ್ತು ಮಾಜಿ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ ಅವರನ್ನು ಭೇಟಿ ಮಾಡಿ ನೀಡಿರುವಂತೆ ಸಲಹೆಯಂತೆ, ಕಾರ್ಯಕ್ರಮದ ರೂಪುರೇಷೆಗಾಗಿ ನಾಡಿದ್ದು,ಪೂರ್ವಭಾವಿ ಸಭೆ ಕರೆಯಲಾಗಿದೆ.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಆಧಾರದ ಮೇಲೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಪರಿಶಿಷ್ಟ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ 7 ರಷ್ಟು ಮೀಸಲಾತಿಯನ್ನು ಹೆಚ್ಚಿಸಿದೆ. ಈಗ ಈ ನಿರ್ಧಾರವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವ ಜವಾಬ್ದಾರಿ ಕೇಂದ್ರದ ಮೇಲಿದೆ.

 ಬಿಜೆಪಿಯ ಎಸ್ ಟಿ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಬುಡಕಟ್ಟು ಸಚಿವರು ಹಾಗೂ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಪ್ರಭಾಕರ ಮೈಸನಾಯಕ ಹೇಳಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾರ್ ಕ್ಯಾಷಿಯರ್‌ಗೆ ಬೆದರಿಕೆ; ಇಬ್ಬರು ಉದ್ಯಮಿಗಳು, ಪ್ರಭಾವಿ ಮಹಿಳೆ ಮೇಲೆ ಕಣ್ಣಿಟ್ಟ ಪೊಲೀಸರು!

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!