ಸಚಿವ ಸುಧಾಕರ್ 
ರಾಜಕೀಯ

ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ: ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಕಾಂಗ್ರೆಸ್ ಸ್ಥಿತಿ; ಸಚಿವ ಸುಧಾಕರ್

ಮತದಾರರ ಗುರುತಿನ ಚೀಟಿ ಅಕ್ರಮ ಆರೋಪ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.

ಬೆಂಗಳೂರು: ಮತದಾರರ ಗುರುತಿನ ಚೀಟಿ ಅಕ್ರಮ ಆರೋಪ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.

ಅರೋಗ್ಯ ಸಚಿವ ಡಾ ಕೆ.ಸುಧಾಕರ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, 'ಕುಣಿಯಲಾರದವನಿಗೆ ನೆಲ ಡೊಂಕು' ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ಪಕ್ಷ ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೆ ಬಂದಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ ಎಂದು ಹೇಳಿದ್ದಾರೆ.

ದಿಟ್ಟ ನಾಯಕತ್ವ, ಅಭಿವೃದ್ಧಿ, ಸುಶಾಸನ, ಭ್ರಷ್ಟಾಚಾರ-ಮುಕ್ತ ಆಡಳಿತ ನೀಡುವ ಮೂಲಕ ದೇಶಾದ್ಯಂತ ಜನಮನ್ನಣೆ ಪಡೆಯುತ್ತಿರುವ ನಮ್ಮ ಪಕ್ಷಕ್ಕೆ ಚುನಾವಣೆ ಗೆಲ್ಲಲು ಯಾವುದೇ ವಾಮ ಮಾರ್ಗದ ಅವಶ್ಯಕತೆಯೂ ಇಲ್ಲ ಅದರ ಬಗ್ಗೆ ನಂಬಿಕೆಯೂ ಇಲ್ಲ.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು 'ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ' ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT