ಸಿದ್ದರಾಮಯ್ಯ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಮದುವೆ ಮನೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ ಸಿದ್ದರಾಮಯ್ಯ!

ಮಾಜಿ ಸಚಿವರಾದ ಇಕ್ಬಾಲ್‌ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌.ಶ್ರೀನಾಥ್‌ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಇಕ್ಬಾಲ್‌ ಅನ್ಸಾರಿ ಹಾಗೂ ಕನಕಗಿರಿಯಿಂದ ಶಿವರಾಜ ತಂಗಡಗಿ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದರು.

ಕೊಪ್ಪಳ ತಾಲ್ಲೂಕಿನ ವನಬಳ್ಳಾರಿಯಲ್ಲಿ ಭಾನುವಾರ ಕಾಂಗ್ರೆಸ್ ಮುಖಂಡ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹನುಮಂತಪ್ಪ ಅವರ ಸಹೋದರನ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ್ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಬೇಕು ಎಂದರು.

ಜಿಲ್ಲೆಯಿಂದ ನಮಗೆ ಪೂರ್ಣ ಬೆಂಬಲ ನೀಡಿ, ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಮಾಜಿ ಸಚಿವರಾದ ಇಕ್ಬಾಲ್‌ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌.ಶ್ರೀನಾಥ್‌ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು. ಮೂವರೂ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದ ಸೋಮವಾರಕ್ಕೂ ಮೊದಲೇ ಸಿದ್ದರಾಮಯ್ಯ ಅವರು ‘ಇಕ್ಬಾಲ್‌ ಅನ್ಸಾರಿ ಗಂಗಾವತಿ ಕ್ಷೇತ್ರದ ಅಭ್ಯರ್ಥಿ’ ಎಂದು  ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT