ರಾಜಕೀಯ

ಐದು ಜಿಲ್ಲೆಗಳಿಗೆ ನೂತನ ಕಾಂಗ್ರೆಸ್ ಅಧ್ಯಕ್ಷರ ನೇಮಕ

Nagaraja AB

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಐದು ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ನೇಮಕ ಮಾಡಿದೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿ.ಆರ್.ಗೌಡ, ಯಾದಗಿರಿ- ಬಸರೆಡ್ಡಿ, ಕೊಡಗು- ಧರ್ಮರಾಜ ಉತ್ತಪ್ಪ, ತುಮಕೂರು- ಚಂದ್ರಶೇಖರ ಗೌಡ, ಹಾಸನ- ಇ.ಎಚ್. ಲಕ್ಷ್ಮಣ ಅವರನ್ನು ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮತಿ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

SCROLL FOR NEXT