ಎಂ ಟಿಬಿ ನಾಗರಾಜ್ 
ರಾಜಕೀಯ

ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ, ಅದಕ್ಕೆ ಜನ ನನ್ನನ್ನು ಸೋಲಿಸಿದರು: ಎಂಟಿಬಿ ನಾಗರಾಜ್

ನಾನು ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ. ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಶನಿವಾರ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ನಾನು ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ. ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಶನಿವಾರ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ.

ಇಂದು ಗೌರಿಬಿದನೂರು ತಾಲೂಕಿನ ಜರಬಂಡಹಳ್ಳಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಕಳೆದ ಉಪ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದರು. ಈ ವೇಳೆ ವೇದಿಕೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮತ್ತು ಆರೋಗ್ಯ ಸಚಿವ ಸುಧಾಕರ್ ಸಹ ಇದ್ದರು.

ಯಾವ ಶಾಸಕರು, ಯಾವ ಸರ್ಕಾರ ಕೆಲಸ ಮಾಡಿದೆ ಅಂತ ಜನರೇ ನೆನೆಪಿಟ್ಟುಕೊಳ್ಳಬೇಕು. ಯಾಕೆಂದರೆ ಚುನಾವಣೆ ಬಂದ ನಾಲ್ಕೈದು ದಿನದಲ್ಲೇ ಮೆರೆತು ಬಿಡುತ್ತೀರಾ. ನಿದ್ದೆ ಮಂಪರು ಬಂದ ಹಾಗೆ ತೂಕಡಿಸಿಬಿಡುತ್ತೀರಾ. ಮೊನ್ನೆ ನಡೆದ ಬೈ ಎಲೆಕ್ಷನ್‍ನಲ್ಲಿ ನಾನು ಸೋಲಬೇಕಿತ್ತಾ? ಆದರೆ ಸೋಲಿಸಿಬಿಟ್ಟಿದ್ದೀರಾ ಎಂದು ಬೇಸರ ವ್ಯಕ್ತಪಡಿಸಿದರು.

ಸುಧಾಕರ್ ಜೊತೆಗೆ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದನಲ್ಲ ಅದಕ್ಕೆ ಸೋಲಿಸಿಬಿಟ್ಟಿದ್ದೀರಾ. ಆದರೆ ಸುಧಾಕರ್‌ನನ್ನು ಗೆಲ್ಲಿಸಿದ್ದೀರಾ. ಇದೇ ನನಗೆ ನೋವು ತರಿಸಿದೆ. ಸೋಲಿನಿಂದ ನನಗೆ ಏನೂ ಕಷ್ಟವಾಗಲಿಲ್ಲ. ಆದರೆ ಹೊಸಕೋಟೆ ತಾಲೂಕಿನ ಅಭಿವೃದ್ಧಿಗೆ ಹಿನ್ನೆಡೆ ಆಯಿತು. ಹೊಸಕೋಟೆ ಜನರ ಸೇವೆ ಮಾಡಲು ಆಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT