ಕೊತ್ವಾಲ್ ಮತ್ತು ಡಿ ಕೆ ಶಿವಕುಮಾರ್ 
ರಾಜಕೀಯ

ಕಾಂಗ್ರೆಸ್‌ ರೌಡಿಗಳನ್ನು ಖಂಡಿಸುತ್ತದೆಯಂತೆ! ನಿಮ್ಮ ಪಕ್ಷದ ನಾಯಕರ 'ಆ ದಿನಗಳು' ಮರೆತು ಹೋಗಿವೆಯೆ?

ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ

ಬೆಂಗಳೂರು: ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.  ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ಹರಿಹಾಯ್ದಿತ್ತು.

ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ, ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಒಂದು ಕಾಲದಲ್ಲಿ ಕೊತ್ವಾಲ್‌ನ ನೆಚ್ಚಿನ ಶಿಷ್ಯ, ತಿಹಾರ್ ಜೈಲಿನಿಂದ ಐ ಎನ್ ಸಿ ಕರ್ನಾಟಕ ರಾಜ್ಯಾಧ್ಯಕ್ಷ ಹುದ್ದೆಗೆ ಬಡ್ತಿ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ "ಆ ದಿನಗಳು" ಮರೆತು ಹೋಗಿದೆಯಾ? ಎಂದು ಪ್ರಶ್ನಿಸಿದೆ.

ಗೂಂಡಾಗಿರಿ, ರೌಡಿಸಂ ಮೇರಿಟ್ ಅಂತ ಪರಿಗಣಿಸಿ, ವಿರೋಧದ ನಡುವೆಯೂ ನಲಪಾಡ್ ಇತ್ತೀಚೆಗೆ ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದರು.  ನಿಮಗೆ ಯೂತ್ ಕಾಂಗ್ರೆಸ್ ಅಧ್ಯಕ್ಷರ "ಆ ದಿನಗಳು" ಮರೆತು ಹೋಗಿದೆಯಾ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಕೊಲೆ ಆರೋಪಿ ವಿನಯ್ ಕುಲಕರ್ಣಿ, ಗೂಂಡಾಗಿರಿಯ ಮೊಹಮ್ಮದ್ ನಲಪಾಡ್ ಯೂತ್ ಕಾಂಗ್ರೆಸ್ ನಾಯಕರು!. ಕಾಂಗ್ರೆಸ್‌ ರೌಡಿಗಳನ್ನು ಖಂಡಿಸುತ್ತದೆಯಂತೆ! ಮೊದಲು ನಿಮ್ಮ ಪಕ್ಷದ ನಾಯಕರ "ಆ ದಿನಗಳು" ಹೇಗಿವೆ ಅಂತ ನೋಡಿ ಎಂದು ಲೇವಡಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT