ಬಸವರಾಜ ಬೊಮ್ಮಾಯಿ 
ರಾಜಕೀಯ

ಬೊಮ್ಮಾಯಿ ದೆಹಲಿ ಟೂರಿಸ್ಟ್, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸತಾಯಿಸುತ್ತಿರುವುದು ನೋಡಿ ಪಾಪ ಅನಿಸುತ್ತಿದೆ!

ಸಚಿವ ಸಂಪುಟ ವಿಸ್ತರಣೆ ಹಾಗೂ ಗಡಿ ವಿವಾದ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲೇಳೆದ ಕಾಂಗ್ರೆಸ್, ಬೊಮ್ಮಾಯಿ ದೆಹಲಿ ಟೂರಿಸ್ಟ್. ಅವರು ಹೈಕಮಾಂಡ್ ನಾಯಕರು ಭೇಟಿ ಮಾಡಲು...

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಗಡಿ ವಿವಾದ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲೇಳೆದ ಕಾಂಗ್ರೆಸ್, ಬೊಮ್ಮಾಯಿ ದೆಹಲಿ ಟೂರಿಸ್ಟ್. ಅವರು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ ಎಂದು ಟ್ವೀಟ್ ಮಾಡಿದೆ.

ಸಿಎಂ ಬೊಮ್ಮಾಯಿ ಅವರು ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ.

ದೆಹಲಿ ಭೇಟಿಯಿಂದ ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಾಗುತ್ತಿಲ್ಲ ಎಂದು ಕಾಂಗ್ರೆಸ್ ಛೇಡಿಸಿದೆ.

ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ ಎಂದಿದ್ದ ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ?

ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ? ಬೊಮ್ಮಾಯಿಯವರು ಅಷ್ಟು ಅಸಮರ್ಥರೆ? ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ? ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT