ಬಸವರಾಜ ಬೊಮ್ಮಾಯಿ 
ರಾಜಕೀಯ

ಬೊಮ್ಮಾಯಿ ದೆಹಲಿ ಟೂರಿಸ್ಟ್, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸತಾಯಿಸುತ್ತಿರುವುದು ನೋಡಿ ಪಾಪ ಅನಿಸುತ್ತಿದೆ!

ಸಚಿವ ಸಂಪುಟ ವಿಸ್ತರಣೆ ಹಾಗೂ ಗಡಿ ವಿವಾದ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲೇಳೆದ ಕಾಂಗ್ರೆಸ್, ಬೊಮ್ಮಾಯಿ ದೆಹಲಿ ಟೂರಿಸ್ಟ್. ಅವರು ಹೈಕಮಾಂಡ್ ನಾಯಕರು ಭೇಟಿ ಮಾಡಲು...

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಗಡಿ ವಿವಾದ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲೇಳೆದ ಕಾಂಗ್ರೆಸ್, ಬೊಮ್ಮಾಯಿ ದೆಹಲಿ ಟೂರಿಸ್ಟ್. ಅವರು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ ಎಂದು ಟ್ವೀಟ್ ಮಾಡಿದೆ.

ಸಿಎಂ ಬೊಮ್ಮಾಯಿ ಅವರು ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ.

ದೆಹಲಿ ಭೇಟಿಯಿಂದ ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಾಗುತ್ತಿಲ್ಲ ಎಂದು ಕಾಂಗ್ರೆಸ್ ಛೇಡಿಸಿದೆ.

ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ ಎಂದಿದ್ದ ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ?

ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ? ಬೊಮ್ಮಾಯಿಯವರು ಅಷ್ಟು ಅಸಮರ್ಥರೆ? ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ? ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!