ಬಿಜೆಪಿ ನಾಯಕರ ಜೊತೆ ರೌಡಿ ಸುನೀಲ 
ರಾಜಕೀಯ

ದೋ ನಂಬರ್ ದಂಧೆ ಮಾಡುವವರೇ ಅದರ್ಶಪುರುಷರು: ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ!

ದೋ ನಂಬರ್ ದಂಧೆ ಮಾಡುವವರೇ ಬಿಜೆಪಿಗೆ ಅದರ್ಶಪುರುಷರು. ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ ಲಜ್ಜೆಗೇಡಿತನದ ಪರಮಾವಧಿಯನ್ನು ತಲುಪಿದೆ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.

ಬೆಂಗಳೂರು:  ರೌಡಿ ಸೈಲೆಂಟ್ ಸುನೀಲ ಬಿಜೆಪಿ ನಾಯಕರ ಜೊತೆ ವೇದಿಕೆ ಹಂಚಿಕೊಂಡ ಸಂಬಂಧ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ಯುದ್ಧ ನಡೆದಿದೆ. ದೋ ನಂಬರ್ ದಂಧೆ ಮಾಡುವವರೇ ಅದರ್ಶಪುರುಷರು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಗಡಿಪಾರು ಆಗಿದ್ದ ವ್ಯಕ್ತಿಯನ್ನೇ ಪಕ್ಷದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಿದ್ದ ಬಿಜೆಪಿಗೆ ಪುಡಿ ರೌಡಿಗಳೆಲ್ಲ ದೇವರುಗಳಂತೆ ಕಾಣುವುದು ಸಹಜ ವಿಚಾರವೇ.. ದೋ ನಂಬರ್ ದಂಧೆ ಮಾಡುವವರೇ ಬಿಜೆಪಿಗೆ ಅದರ್ಶಪುರುಷರು. ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ ಲಜ್ಜೆಗೇಡಿತನದ ಪರಮಾವಧಿಯನ್ನು ತಲುಪಿದೆ ಎಂದು ಕರ್ನಾಟಕ ಕಾಂಗ್ರೆಸ್  ವಾಗ್ಧಾಳಿ ನಡೆಸಿದೆ.

ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯವನ್ನು ಬಿಜೆಪಿ ಕಸಿಯುತ್ತಿದೆ, ಪೊಲೀಸರೇ ರೌಡಿಗಳಿಗೆ ಸೆಲ್ಯೂಟ್ ಹೊಡೆಯುವ ಪರಿಸ್ಥಿತಿ ನಿರ್ಮಿಸುತ್ತಿದೆ. ಮೊನ್ನೆಯಷ್ಟೇ ಸೈಲೆಂಟ್ ಸುನಿಲ್ ಎಂಬ ರೌಡಿಯನ್ನು ಹುಡುಕಿ ರೈಡ್ ಮಾಡಿದ್ದ ಪೊಲೀಸರೇ ಈಗ ಆತನ ಎದುರು ಸೈಲೆಂಟ್ ಆಗಿದ್ದಾರೆ. ಸಮಾಜಕ್ಕೆ ಯಾವ ಸಂದೇಶ ಕೊಡುತ್ತಿದೆ ಸರ್ಕಾರ? ಎಂದು ಪ್ರಶ್ನಿಸಿದೆ.

40% ಕಮಿಷನ್ ವಸೂಲಿ ಸಾಲದೆ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಹಫ್ತಾ ವಸೂಲಿಗೂ ಬಿಜೆಪಿ ತಯಾರಿ ನಡೆಸಿರುವಂತಿದೆ! ಬಿಜೆಪಿಯಲ್ಲಿ “ರೌಡಿ ಮೋರ್ಚಾ” ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ. ಸೋಲುವ ಭಯದಲ್ಲಿರುವ ಬಿಜೆಪಿ ರೌಡಿಗಳನ್ನು ಬಳಸಿ ಚುನಾವಣೆಗೆ ಸಿದ್ಧತೆ ನಡೆಸಿದೆಯೇ ಬಸವರಾಜ ಬೊಮ್ಮಾಯಿ ಅವರೇ? ಇದೇನಾ ಬಿಜೆಪಿಯ ಸಂಸ್ಕೃತಿ, ಸಂಸ್ಕಾರ? ಎಂದು ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT