ಸಂಗ್ರಹ ಚಿತ್ರ 
ರಾಜಕೀಯ

ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎಂಟ್ರಿ: ಇಂದು ಮೈಸೂರಿಗೆ ಆಗಮನ, ಕೊಡಗಿನಲ್ಲಿ ವಾಸ್ತವ್ಯ

ರಾಹುಲ್ ಗಾಂಧಿಯವರ ಸಾರಥ್ಯದ ಕಾಂಗ್ರೆಸ್ ನ  ಭಾರತ ಐಕ್ಯತಾ ಯಾತ್ರೆ ಕರ್ನಾಟಕದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪದಾರ್ಪಣೆ ಮಾಡಿತು. ವಿಧಾನಸಭೆ ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ನೂರಾರು ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಅವರು ರಾಹುಲ್ ಗಾಂಧಿಯವರೊಂದಿಗೆ ನಡಿಗೆಯಲ್ಲ

ಮೈಸೂರು: ರಾಹುಲ್ ಗಾಂಧಿಯವರ ಸಾರಥ್ಯದ ಕಾಂಗ್ರೆಸ್ ನ  ಭಾರತ ಐಕ್ಯತಾ ಯಾತ್ರೆ ಕರ್ನಾಟಕದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪದಾರ್ಪಣೆ ಮಾಡಿತು. ವಿಧಾನಸಭೆ ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ನೂರಾರು ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಅವರು ರಾಹುಲ್ ಗಾಂಧಿಯವರೊಂದಿಗೆ ನಡಿಗೆಯಲ್ಲಿ ಭಾಗಿಯಾದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ(Priyanka Gandhi) ಮೈಸೂರಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸೋನಿಯಾ ಆಗಮಿಸಲಿದ್ದಾರೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಪಾದಯಾತ್ರೆ ಸದ್ಯ ಮೈಸೂರಿಗೆ ತಲುಪಿದ್ದು ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಯಾತ್ರೆಯಲ್ಲಿ ಭಾಗಿಯಾಗುವ ಮುನ್ನ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವಿಮಾನ‌ ನಿಲ್ದಾಣದಿಂದ ನೇರವಾಗಿ ಚಾಮುಂಡಿ‌ಬೆಟ್ಟಕ್ಕೆ ತೆರಳುವ ಸಾಧ್ಯತೆ ಇದೆ. ನಂತರ ಮತ್ತೆ ಹೆಲಿಕಾಫ್ಟರ್ ಮೂಲಕ ಕೊಡಗಿಗೆ ತೆರಳಲಿದ್ದಾರೆ. ಕೊಡಗಿನ ರೆಸಾರ್ಟ್ ವೊಂದರಲ್ಲಿ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇನ್ನು ಸಂಜೆ ವೇಳೆಗೆ ರಾಹುಲ್ ಗಾಂಧಿ ಕೂಡ ಕೊಡಗಿಗೆ ಹೋಗಿ ಕುಟುಂಬದ ಜೊತೆ ಎರಡು ದಿನ‌ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಅಕ್ಟೋಬರ್ 4 ಹಾಗೂ 5ರಂದು ಪಾದಯಾತ್ರೆಗೆ ವಿರಾಮ ಇರಲಿದೆ.

ಬಳಿಕ ಅಕ್ಟೋಬರ್ 6 ರಂದು ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದೆ. ಈ ಯಾತ್ರೆಯಲ್ಲಿ ರಾಹುಲ್, ಸೋನಿಯಾ ಭಾಗಿಯಾಗಲಿದ್ದಾರೆ. ಅಕ್ಟೋಬರ್ 7 ರಂದು ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು ಸಹೋದರ ರಾಹುಲ್ ಜೊತೆಗೆ ನಾಗಮಂಗಲದಲ್ಲಿ ಹೆಜ್ಜೆ ಹಾಕಲಿದ್ದಾರೆ. ಆದಿ ಚುಂಚನಗಿರಿ ಮಠಕ್ಕೂ ಪ್ರಿಯಾಂಕಾ ಗಾಂಧಿ ಭೇಟಿ ನೀಡುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT