ಮಣಿಕಾಂತ್‌ ರಾಥೋಡ್‌ 
ರಾಜಕೀಯ

ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಗೆ ಕಲಬುರಗಿ ಪೊಲೀಸರಿಂದ ಗಡಿಪಾರು ಆದೇಶ!

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಮಣಿಕಾಂತ್‌ ರಾಥೋಡ್‌ ಅವರನ್ನು ಕಲಬುರಗಿ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಲಾಗಿದೆ.

ಕಲಬುರಗಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಮಣಿಕಾಂತ್‌ ರಾಥೋಡ್‌ ಅವರನ್ನು ಕಲಬುರಗಿ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಲಾಗಿದೆ.

ಪಡಿತರ ಅಕ್ಕಿ ಕಳ್ಳಸಾಗಾಟ, ಜನರಿಗೆ ಬೆದರಿಕೆ ಹಾಕಿದ ಆರೋಪ ಸೇರಿದಂತೆ ವಿವಿಧ 20 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಮಣಿಕಂಠ ರಾಠೋಡನನ್ನು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ ಎಂದು ಕಲಬುರಗಿ ನಗರ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಯೂ ಆದ ಡಿಸಿಪಿ ಅಡ್ಡೂರು ಶ್ರೀನಿವಾಸುಲು ಅವರು ಆದೇಶದಲ್ಲಿ ವಿವರಿಸಿದ್ದಾರೆ.

ಗಡಿಪಾರು ಮಾಡಿರುವ ಒಂದು ವರ್ಷದ ಅವಧಿಯಲ್ಲಿ ಮಣಿಕಾಂತ್ ರಾಥೋಡ್ ಶಿವಮೊಗ್ಗ ಜಿಲ್ಲೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೇ ವಾಸಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕಲಬುರಗಿ ತೊರೆದು ಶಿವಮೊಗ್ಗಕ್ಕೆ ತೆರಳಲು ಆರೋಪಿಗೆ ಪೊಲೀಸರು ಮೂರು ದಿನ ಸಮಯಾವಕಾಶ ನೀಡಿದ್ದಾರೆ,  ಮಂಗಳವಾರ ಗಡುವು ಮುಗಿಯಲಿದೆ, ಒಂದು ವೇಳೆ ಆತ ಕಲಬುರಗಿ ನಗರ ತೊರೆಯದಿದ್ದರೇ ಬಲವಂತವಾಗಿ ಪೊಲೀಸರು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಲಿದ್ದಾರೆ.

ತನ್ನ ಮೇಲೆ ಹಾಕಿರುವ ಗಡಿಪಾರು ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ರಾಥೋಡ್ ಮುಂದಾಗಿದ್ದಾರೆ ಎಂದು ಆತನ ಆಪ್ತ ಮೂಲಗಳು ತಿಳಿಸಿವೆ. ರಾಥೋಡ್ ಬಿಜೆಪಿಯ ಸದಸ್ಯರಾಗಿದ್ದು, ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಯೋಜಿಸುತ್ತಿರುವು ಸತ್ಯ, ಈ ಬಗ್ಗೆ ಪಕ್ಷ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದು  ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ  ಶಿವರಾಜ್ ಪಾಟೀಲ್ ರದ್ದೇವಾಡಗಿ ತಿಳಿಸಿದ್ದಾರೆ.

ಅಕ್ರಮ‌ ಪಡಿತರ ಅಕ್ಕಿ ಸಾಗಾಟ, ಜೀವ ಬೆದರಿಕೆ  ಸೇರಿದಂತೆ ಮೂರು ಜಿಲ್ಲೆಯ ಹಲವಡೆ ವಿವಿಧ ಪ್ರಕರಣಗಳನ್ನು ಮಣಿಕಂಠ ರಾಥೋಡ ಎದುರಿಸುತ್ತಿದ್ದಾರೆ. ಮಣಿಕಂಠ ರಾಠೋಡ ಮೂಲತಃ ಯಾದಗಿರಿ ಜಿಲ್ಲೆ ಗುರುಮಠಕಲ್‌ನ ನಿವಾಸಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ, 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ಗಳ ರೋಚಕ ಜಯ; 3-1 ಸರಣಿ ಗೆಲುವು

Load shedding In bangalore: ಡಿ.20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆ ವರೆಗೂ ವಿದ್ಯುತ್ ಕಡಿತ

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!

SCROLL FOR NEXT