ಡಿ ಕೆ ಶಿವಕುಮಾರ್ 
ರಾಜಕೀಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆಶಿ ಮನವಿ ತಿರಸ್ಕರಿಸಿದ ಇಡಿ, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7 ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ತಾವು ಮಾಡಿದ್ದ ಮನವಿಯನ್ನು ಜಾರಿ...

ಮೈಸೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7 ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ತಾವು ಮಾಡಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ(ಇಡಿ) ತಿರಸ್ಕರಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ತಮ್ಮ ಪಕ್ಷದ ನಾಯಕರ ಜೊತೆ ಮಾತನಾಡಿದ ನಂತರ ನಾಳೆ ವಿಚಾರಣೆಗೆ ಹಾಜರಾಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದಾಗಿ ಡಿಕೆಶಿ ತಿಳಿಸಿದ್ದಾರೆ. 

ಡಿಕೆ ಶಿವಕುಮಾರ್‌ ಅವರ ಮನವಿ ತಿರಸ್ಕರಿಸಿದ ಇಡಿ ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ಹೊಸ ಸಂದೇಶದಲ್ಲಿ ಸೂಚಿಸಿದೆ.

"ಸೆಪ್ಟೆಂಬರ್ 23, 2022 ರ ಸಮನ್ಸ್‌ನ ಪ್ರಕಾರ ಅಕ್ಟೋಬರ್ 7, 2022 ರಂದು ನಿಮ್ಮ ಹೇಳಿಕೆ ರೆಕಾರ್ಡಿಂಗ್‌ಗಾಗಿ ನಮ್ಮ ಕಚೇರಿಯಲ್ಲಿ ಹಾಜರಾಗುವಂತೆ ಮತ್ತೊಮ್ಮೆ ನಿಮಗೆ ನಿರ್ದೇಶಿಸಲಾಗಿದೆ" ಎಂದು ಇಡಿ ಸಹಾಯಕ ನಿರ್ದೇಶಕ ಕುಲದೀಪ್ ಸಿಂಗ್ ಕಳುಹಿಸಿರುವ ಇಮೇಲ್ ನಲ್ಲಿ ತಿಳಿಸಲಾಗಿದೆ.

ಶಿವಕುಮಾರ್ ಅವರು ಪ್ರಸ್ತುತ ಕರ್ನಾಟಕದ ಮೂಲಕ ಹಾದುಹೋಗುವ ಕಾಂಗ್ರೆಸ್‌ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಿದ್ದು, ಅಕ್ಟೋಬರ್ 21 ರವರೆಗೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ತನಿಖಾ ಸಂಸ್ಥೆಗೆ ಮನವಿ ಮಾಡಿದ್ದರು.

"ಇಡಿ ಮುಂದೆ ಹಾಜರಾಗಲು ನಾನು ಸಮಯ ಕೋರಿದ್ದೆ. ಆದರೆ ಅದನ್ನು ನಿರಾಕರಿಸಲಾಗಿದೆ. ನನ್ನ ನಾಯಕರೊಂದಿಗೆ ಮಾತನಾಡಿದ ನಂತರ ಏಜೆನ್ಸಿಯ ಮುಂದೆ ಹಾಜರಾಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದಾಗಿ" ಎಂದು ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಾರ್ಯಾಚರಣೆಗಳ ಬಗ್ಗೆ ನಡೆಯುತ್ತಿರುವ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅವರ ಸಹೋದರ ಸಂಸದ, ಡಿ ಕೆ ಸುರೇಶ್ ಅವರಿಗೂ ಇಡಿ ಸಮನ್ಸ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!