ಡಿ ಕೆ ಶಿವಕುಮಾರ್ 
ರಾಜಕೀಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆಶಿ ಮನವಿ ತಿರಸ್ಕರಿಸಿದ ಇಡಿ, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7 ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ತಾವು ಮಾಡಿದ್ದ ಮನವಿಯನ್ನು ಜಾರಿ...

ಮೈಸೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7 ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ತಾವು ಮಾಡಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ(ಇಡಿ) ತಿರಸ್ಕರಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ತಮ್ಮ ಪಕ್ಷದ ನಾಯಕರ ಜೊತೆ ಮಾತನಾಡಿದ ನಂತರ ನಾಳೆ ವಿಚಾರಣೆಗೆ ಹಾಜರಾಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದಾಗಿ ಡಿಕೆಶಿ ತಿಳಿಸಿದ್ದಾರೆ. 

ಡಿಕೆ ಶಿವಕುಮಾರ್‌ ಅವರ ಮನವಿ ತಿರಸ್ಕರಿಸಿದ ಇಡಿ ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ಹೊಸ ಸಂದೇಶದಲ್ಲಿ ಸೂಚಿಸಿದೆ.

"ಸೆಪ್ಟೆಂಬರ್ 23, 2022 ರ ಸಮನ್ಸ್‌ನ ಪ್ರಕಾರ ಅಕ್ಟೋಬರ್ 7, 2022 ರಂದು ನಿಮ್ಮ ಹೇಳಿಕೆ ರೆಕಾರ್ಡಿಂಗ್‌ಗಾಗಿ ನಮ್ಮ ಕಚೇರಿಯಲ್ಲಿ ಹಾಜರಾಗುವಂತೆ ಮತ್ತೊಮ್ಮೆ ನಿಮಗೆ ನಿರ್ದೇಶಿಸಲಾಗಿದೆ" ಎಂದು ಇಡಿ ಸಹಾಯಕ ನಿರ್ದೇಶಕ ಕುಲದೀಪ್ ಸಿಂಗ್ ಕಳುಹಿಸಿರುವ ಇಮೇಲ್ ನಲ್ಲಿ ತಿಳಿಸಲಾಗಿದೆ.

ಶಿವಕುಮಾರ್ ಅವರು ಪ್ರಸ್ತುತ ಕರ್ನಾಟಕದ ಮೂಲಕ ಹಾದುಹೋಗುವ ಕಾಂಗ್ರೆಸ್‌ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಿದ್ದು, ಅಕ್ಟೋಬರ್ 21 ರವರೆಗೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ತನಿಖಾ ಸಂಸ್ಥೆಗೆ ಮನವಿ ಮಾಡಿದ್ದರು.

"ಇಡಿ ಮುಂದೆ ಹಾಜರಾಗಲು ನಾನು ಸಮಯ ಕೋರಿದ್ದೆ. ಆದರೆ ಅದನ್ನು ನಿರಾಕರಿಸಲಾಗಿದೆ. ನನ್ನ ನಾಯಕರೊಂದಿಗೆ ಮಾತನಾಡಿದ ನಂತರ ಏಜೆನ್ಸಿಯ ಮುಂದೆ ಹಾಜರಾಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದಾಗಿ" ಎಂದು ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಾರ್ಯಾಚರಣೆಗಳ ಬಗ್ಗೆ ನಡೆಯುತ್ತಿರುವ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅವರ ಸಹೋದರ ಸಂಸದ, ಡಿ ಕೆ ಸುರೇಶ್ ಅವರಿಗೂ ಇಡಿ ಸಮನ್ಸ್ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT