ಹೆಚ್ ಡಿ ದೇವೇಗೌಡ 
ರಾಜಕೀಯ

ಜೆಡಿಎಸ್ ಉಳಿಸಲು ಜನರು ಶಕ್ತಿ ಕೊಡಬೇಕು: ಹೆಚ್.ಡಿ. ದೇವೇಗೌಡ

ಜೆಡಿಎಸ್ ಪಕ್ಷ ಉಳಿಸಲು ಜನರು ಶಕ್ತಿ ಕೊಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. 

ಬೆಂಗಳೂರು: ಜೆಡಿಎಸ್ ಪಕ್ಷ ಉಳಿಸಲು ಜನರು ಶಕ್ತಿ ಕೊಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಬಸವನಗುಡಿ ಮೈದಾನದಲ್ಲಿಂದು ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನಗೆ ಇನ್ನು ಹೋರಾಟ ಮಾಡುವ ಶಕ್ತಿ ಇದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ, ಎಲ್ಲರೂ ಸೇರಿ ಪಕ್ಷ ಉಳಿಸಬೇಕಿದೆ. ಈ ನಿಟ್ಟಿನಲ್ಲಿ ಜನರು ಪಕ್ಷಕ್ಕೆ ಶಕ್ತಿ ನೀಡಿ ಎಂದು ಪುನರುಚ್ಚರಿಸಿದರು.

ಮುಂಬರುವ ಕಾರ್ಯಕಾರಿಣಿ ಸಭೆಯಲ್ಲೂ ಭಾಗಿಯಾಗ್ತೀನಿ. ಯಾವುದೇ ಒಂದು ಸಮಾಜಕ್ಕೆ ನೋವಾಗಲು ಬಿಡುವುದಿಲ್ಲ, ಜೊತೆಗೆ ಹೇಳಿದ ಮೇಲೆ ನಾವು ಕಾರ್ಯಗತ ಮಾಡಲೇಬೇಕು, ಮುಸ್ಲಿಂ ರಿಗೆ ಮೀಸಲಾತಿ ಅಂತ ಎಂದೂ ಹೇಳಿರಲಿಲ್ಲ ಆದರೂ ನಮ್ಮ ಸರ್ಕಾರದಲ್ಲಿ ಮಾಡಿದೆ ಎಂದು ಹೇಳಿದರು.

ನನ್ನ ಕಣ್ಣ ಮುಂದೆ ಜೆ ಡಿಎಸ್ ಅಧಿಕಾರಕ್ಕೆ ಬರೋದು ಸತ್ಯ. ಮತ್ತೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತಾರೆ, ಇದು ನಡೆದೆ ನಡೆಯುತ್ತದೆ ಯಾರಿಗೂ ಸಂಶಯ ಬೇಡ. ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ, ಕೊನೆಯವರೆಗೂ ರಾಜ್ಯದ ನೆಲ ಜಲದ ವಿಷಯದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದರು. 

ನಾನು ಸಿಎಂ ಆಗುವಾಗಲು ಹೋರಾಟ ಆಯ್ತು, ನಾನು 90ರ ದಶಕದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿದೆ. ನಾನು ಸಿಎಂ ಆಗಿದ್ದಾಗ ರಾಜ್ಯದಲ್ಲಿ 16 ಲೋಕಸಭಾ ಸ್ಥಾನ ಬಂತು. ಆಗ ಕೆಲವರು ಕುಮಾರಸ್ವಾಮಿ ಅವರನ್ನು ಹಠ ಮಾಡಿ ನೀವು ಲೋಕಸಭೆಗೆ ಹೋಗಿ ಅಂದ್ರು ಆಗ ಗೆದ್ದು ಬಂದರು ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಮಧ್ಯಸ್ಥಿಕೆ ಯಾರೇ ವಹಿಸಲಿ ಅದರಿಂದ ಭಾರತಕ್ಕೇ ಲಾಭ! US ಜೊತೆ ಅಂಥಹ ಸಂಬಂಧ ಬೆಳಸಲು ಪಾಕ್ ಗೆ ಮಾತ್ರ ಸಾಧ್ಯ, ಬೇರಾರಿಗೂ ಅಲ್ಲ: ತರೂರ್ ವ್ಯಂಗ್ಯ

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

SCROLL FOR NEXT