ರಾಹುಲ್ ಗಾಂಧಿ ಸುದ್ದಿಗೋಷ್ಠಿ 
ರಾಜಕೀಯ

ನನ್ನ ವಿರುದ್ಧ ಅಪಪ್ರಚಾರಕ್ಕಾಗಿ ಮಾಧ್ಯಮಗಳಿಗೆ ಕೋಟ್ಯಂತರ ರೂ. ವೆಚ್ಚ: ರಾಹುಲ್ ಗಾಂಧಿ

ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವಂತೆಯೇ ತಮ್ಮ ವಿರುದ್ಧ ಅಪ ಪ್ರಚಾರಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ತುರುವೇಕೆರೆ: ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವಂತೆಯೇ ನನ್ನ ವಿರುದ್ಧ ಅಪ ಪ್ರಚಾರಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವೊಂದು ಸಿದ್ದಾಂತಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ ಎಂಬುದು ಅರ್ಥವಾಗಿದೆ. ಹೀಗಾಗಿ ಬಿಜೆಪಿ, ಆರ್ ಎಸ್ ಎಸ್ ಮತ್ತಿತರ ಶಕ್ತಿಗಳು ಗೊಂದಲ ಸೃಷ್ಟಿಸುತ್ತಿವೆ. ತನ್ನ ವಿರುದ್ಧ ಅಪಪ್ರಚಾರಕ್ಕಾಗಿ ಮಾಧ್ಯಮಗಳಿಗಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದರು. 

ನನ್ನ ಸತ್ಯ ಭಿನ್ನವಾಗಿದೆ. ಇದು ಯಾವಾಗಲೂ ಭಿನ್ನವಾಗಿರುತ್ತದೆ ಮತ್ತು ನನ್ನ ನಿಲುವು ಏನು ಮತ್ತು ಅದಕ್ಕಾಗಿ ನಾನು ಏನು ಮಾಡುತ್ತಿದ್ದೇನೆ ಎಂಬುದನ್ನು ಜನರು ಎಚ್ಚರಿಕೆಯಿಂದ ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿವರಿಸಿದರು. 

ಸಹಜವಾಗಿ ಈ ಯಾತ್ರೆ ರಾಜಕೀಯ ಉದ್ದೇಶ ಹೊಂದಿದೆ. ರಾಜಕೀಯ ವರ್ಗ ಮತ್ತು ನಮ್ಮ ನಾಗರಿಕರ ನಡುವೆ ಅಂತರವಿದೆ. ರಸ್ತೆಯಲ್ಲಿ ಸಾಗಿ ಜನರನ್ನು ಭೌತಿಕವಾಗಿ ಭೇಟಿ ಮಾಡುವುದು ನನ್ನ ಆಲೋಚನೆ ಆಗಿತ್ತು.  ಇದೀಗ ಕಾರು ಅಥವಾ ವಿಮಾನದಲ್ಲಿ ಹೋಗುವುದಕ್ಕಿಂತ  ಮಾಧ್ಯಮಗಳ ಮೂಲಕ ತಲುಪುವುದು ವಿಭಿನ್ನವಾಗಿದೆ ಎಂದು ಅವರು ಹೇಳಿದರು. 

ಕಾಂಗ್ರೆಸ್ ಮುಖಂಡರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ಬಿಜೆಪಿ ಟೀಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್ ಎಸ್ ಎಸ್ ರಾಜಕಾರಣಿ ಮೇಲೆ ದಾಳಿ ಮಾಡಲು ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿದೆ. ಸರ್ಕಾರ ಪತನಗೊಳಿಸಲು, ಒತ್ತಡ ಹೇರಲು ಅವುಗಳನ್ನು ಹೇಗೆಲ್ಲಾ ಬಳಸಿಕೊಳ್ಳಬಹುದೆಂದು ಪ್ರತಿಯೊಬ್ಬರಿಗೂ ಅರ್ಥವಾಗುತ್ತಿದೆ ಎಂದರು. 

ಭಾರತವನ್ನು ಒಗ್ಗೂಡಿಸುವುದು ಭಾರತ್ ಜೋಡೋ ಯಾತ್ರೆ ಉದ್ದೇಶ. 2024 ಚುನಾವಣೆ ದೃಷ್ಟಿಯಿಂದ ಈ ಪರಿಕಲ್ಪನೆ ಬಂದಿಲ್ಲ. ಭಾರತ ವಿಭಜನೆಯಾಗುತ್ತಿರುವುದನ್ನು ನೋಡುತ್ತಿದ್ದೇನೆ. ನಮ್ಮ ಸಮಾಜದಲ್ಲಿ ಹಿಂಸೆಯನ್ನು ಹರಡಲಾಗುತ್ತಿದೆ. ಇದು ನಮ್ಮ ಸಮಾಜಕ್ಕೆ ಅಪಾಯಕಾರಿಯಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT