ಆರ್.ಅಶೋಕ್ 
ರಾಜಕೀಯ

ಟಿಪ್ಪುವನ್ನು ಕನ್ನಡಿಗ ಎಂದು ಒಪ್ಪಿಯೇ ಇಲ್ಲ; ರೈಲಿಗೆ ಒಡೆಯರ್ ಹೆಸರೇ ಸೂಕ್ತ: ಆರ್. ಅಶೋಕ್

ಸರ್ಕಾರ ಒಳ್ಳೆಯ ಉದ್ದೇಶದಿಂದ ಮೈಸೂರು–ಬೆಂಗಳೂರು ನಡುವಿನ ಟಿಪ್ಪು ಎಕ್ಸಪ್ರೆಸ್ ರೈಲಿಗಿದ್ದ ಟಿಪ್ಪು ಹೆಸರು ತೆಗೆದು ಒಡೆಯರ್ ಹೆಸರಿಡಲಾಗಿದೆ. ನಮ್ಮ ಆಯ್ಕೆ ಒಡೆಯರ್ ಅನ್ನೋದೇ ಆಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಸರ್ಕಾರ ಒಳ್ಳೆಯ ಉದ್ದೇಶದಿಂದ ಮೈಸೂರು–ಬೆಂಗಳೂರು ನಡುವಿನ ಟಿಪ್ಪು ಎಕ್ಸಪ್ರೆಸ್ ರೈಲಿಗಿದ್ದ ಟಿಪ್ಪು ಹೆಸರು ತೆಗೆದು ಒಡೆಯರ್ ಹೆಸರಿಡಲಾಗಿದೆ. ನಮ್ಮ ಆಯ್ಕೆ ಒಡೆಯರ್ ಅನ್ನೋದೇ ಆಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಟಿಪ್ಪು ಕನ್ನಡಿಗ ಅಂತ ಒಪ್ಪಿಯೇ ಇಲ್ಲ, ಟಿಪ್ಪುವಿನ ಆಡಳಿತ ಭಾಷೆ ಪರ್ಶಿಯನ್. ಕಗ್ಗೊಲೆ ಮಾಡಿ, ಮತಾಂತರ ಮಾಡಿದ್ದಾನೆ. ಚಲುವನಾರಾಯಣ ಸ್ವಾಮಿ ದೇವಸ್ಥಾನದ ಬಳಿ ಕೊಗ್ಗೊಲೆ ಮಾಡಿದ್ದಾನೆ ಎಂದು ಹೇಳಿದರು.

ಮೈಸೂರು ಮಂಡ್ಯ ಭಾಗಕ್ಕೆ ನೀರು ಕೊಟ್ಟವರು ಒಡೆಯರ್. ತಮ್ಮ ಒಡವೆ ಮಾರಿ ಕೆಆರ್‌ಎಸ್ ಕಟ್ಟಿ ಕರ್ಣರಾದರು. ಮೊದಲ ವಿದ್ಯುತ್ ತಯಾರಿಕೆ ಮಾಡಿದ್ದು, ಸೋಪ್, ಸಕ್ಕರೆ ತಯಾರಿಕೆ ಎಲ್ಲವನ್ಮೂ ಕರ್ನಾಟಕಕ್ಕೆ ಕೊಟ್ಟವರು‌. ಅವರ ಹೆಸರಲ್ಲೇ ಜಂಬೂ ಸವಾರಿ ಆರಂಭವಾಗಿದ್ದು ಹಾಗಾಗಿ ಒಡೆಯರ್ ಹೆಸರು ಸೂಕ್ತವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ವಿರೋಧಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ಇನ್ನು ನೂರು ಟ್ರೈನ್ ತಂದು ಟಿಪ್ಪು, ಲಾಡೆನ್, ಗಜನಿ ಮೊಹಮ್ಮದ್ ಟ್ರೈನ್ ಓಡಿಸಲಿ. ಈ ಹೆಸರನ್ನ ಟ್ರೈನಿಗೆ ಇಟ್ರೆ ಜನರು ಮೆಚ್ತಾರೆ. ಅವರು ಅಧಿಕಾರಕ್ಕೆ ಬಂದಾಗ ಇಟ್ಟುಕೊಳ್ಳಲಿ. ನಮ್ಮ ಬೆಂಬಲ ಒಡೆಯರ್ ಅವರಿಗೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

Pak ಫೀಲ್ಡ್ ಮಾರ್ಷಲ್ ಮುನೀರ್​ಗೆ ಜಾಗತಿಕ ಮುಖಭಂಗ; ಮ್ಯೂನಿಚ್ ಭದ್ರತಾ ಸಮ್ಮೇಳನದ ಗೇಟ್‌ನಲ್ಲೇ ತಡೆದ ಸಿಬ್ಬಂದಿ, Video!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

2026ರ ಮೊದಲ ಸೂರ್ಯಗ್ರಹಣ: ಯಾವಾಗ ಮತ್ತು ಎಲ್ಲಿ ವೀಕ್ಷಿಸಬೇಕು? ಇಲ್ಲಿದೆ ವಿವರ..

SCROLL FOR NEXT