ದಿಗ್ವಿಜಯ್ ಸಿಂಗ್ 
ರಾಜಕೀಯ

ಭಾರತ್ ಜೋಡೋ ಯಾತ್ರೆ ನಂತರ ಹೊಸ ಅವತಾರದಲ್ಲಿ ರಾಹುಲ್ ಗಾಂಧಿ: ದಿಗ್ವಿಜಯ್ ಸಿಂಗ್

ರಾಹುಲ್ ಗಾಂಧಿ ಅವರು "ಭಾರತ್ ಜೋಡೋ" ಸಂಕೇತವಾಗಿದ್ದಾರೆ ಮತ್ತು ಕಾಂಗ್ರೆಸ್‌ನ ಪ್ಯಾನ್-ಇಂಡಿಯಾ ಮಾರ್ಚ್ ನಂತರ ಅವರನ್ನು ಹೊಸ ಅವತಾರದಲ್ಲಿ ನೋಡಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್....

ಬೆಂಗಳೂರು: ರಾಹುಲ್ ಗಾಂಧಿ ಅವರು "ಭಾರತ್ ಜೋಡೋ" ಸಂಕೇತವಾಗಿದ್ದಾರೆ ಮತ್ತು ಕಾಂಗ್ರೆಸ್‌ನ ಪ್ಯಾನ್-ಇಂಡಿಯಾ ಮಾರ್ಚ್ ನಂತರ ಅವರನ್ನು ಹೊಸ ಅವತಾರದಲ್ಲಿ ನೋಡಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾದಾಗಿನಿಂದ ಅದರ ಭಾಗವಾಗಿರುವ ದಿಗ್ವಿಜಯ್ ಸಿಂಗ್ ಅವರು ಇಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಈ ಯಾತ್ರೆಯು ಖಂಡಿತವಾಗಿಯೂ ಕಾಂಗ್ರೆಸ್ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ಏಕೆಂದರೆ ಹಲವು ವರ್ಷಗಳ ನಂತರ ಮೊದಲ ಬಾರಿಗೆ ಹಳೆಯ ಪಕ್ಷದ ಬಗ್ಗೆ ಚರ್ಚಿಸಲಾಗುತ್ತಿದೆ ಎಂದಿದ್ದಾರೆ.

ಪಕ್ಷವನ್ನು ಬಲಪಡಿಸಲು ಈ ಯಾತ್ರೆ ಸಹಕಾರಿಯಾಗಲಿದೆ. ರಾಹುಲ್ ಗಾಂಧಿ ಅವರು ಹಳ್ಳಿ ಹಳ್ಳಿಗೂ ತೆರಳಿ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದು, ಜನರ ಹೆಚ್ಚು ಪ್ರಭಾವಿತರಾಗಿದ್ದಾರೆ ಎಂದ ಅವರು, ಪ್ರಸ್ತುತ ಕಾಂಗ್ರೆಸ್‌ ಸಿದ್ಧಾಂತ ಮತ್ತು ನಾಯಕತ್ವದ ಕೊರತೆ ಎದುರಿಸುತ್ತಿದೆ. ಆದರೆ ಖಂಡಿತವಾಗಿಯೂ ನಾಯಕತ್ವ ಉಗಮವಾಗಲಿದೆ ಎಂದಿದ್ದಾರೆ.

ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ. ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು 3,500 ಕಿ.ಮೀ ನಡೆಯಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT