ರಾಹುಲ್ ಗಾಂಧಿ 
ರಾಜಕೀಯ

ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ- ರಾಹುಲ್ ಗಾಂಧಿ

ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಪ್ರತಿಯೊಂದು ಕಾಮಗಾರಿಗಳಲ್ಲಿಯೂ ಶೇ.40 ರಷ್ಟು ಕಮೀಷನ್ ಪಡೆಯುತ್ತಿದ್ದಾರೆ. 13,000 ಖಾಸಗಿ ಶಾಲೆಗಳು ಶೇ. 40 ರಷ್ಟು ಕಮೀಷನ್ ನೀಡಿವೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಅಂತಾ ಬಿಜೆಪಿ ಶಾಸಕರೇ ಹೇಳುತ್ತಿದ್ದಾರೆ ಎಂದರು.

ಹಿರಿಯೂರು: ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಹಿರಿಯೂರಿನಲ್ಲಿಂದು ಭಾರತ್ ಜೋಡೋ ಯಾತ್ರೆಯ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಹುಲ್ ಗಾಂಧಿ ಪ್ರತಿಯೊಂದು ಕಾಮಗಾರಿಗಳಲ್ಲಿಯೂ ಶೇ.40 ರಷ್ಟು ಕಮೀಷನ್ ಪಡೆಯುತ್ತಿದ್ದಾರೆ. 13,000 ಖಾಸಗಿ ಶಾಲೆಗಳು ಶೇ. 40 ರಷ್ಟು ಕಮೀಷನ್ ನೀಡಿವೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಅಂತಾ ಬಿಜೆಪಿ ಶಾಸಕರೇ ಹೇಳುತ್ತಿದ್ದಾರೆ ಎಂದರು.

ಕರ್ನಾಟಕದಲ್ಲಿ ಉದ್ಯೋಗಗಳುಮಾರಾಟವಾಗುತ್ತಿವೆ. ಸಿಎಂ ಹುದ್ದೆಗಾಗಿ ರೂ. 2,500 ಕೋಟಿ ನೀಡಲಾಗಿದೆ ಅಂತಾ ಬಿಜೆಪಿ ಶಾಸಕರೇ ಹೇಳಿದ್ದಾರೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು 80 ಲಕ್ಷಕ್ಕೆ ಮಾರಾಟ ಮಾಡಲಾಗಿದೆ. ಸಹಾಯಕ ಪ್ರಾಧ್ಯಾಪಕರು ಮತ್ತು ಇಂಜಿನಿಯರಿಂಗ್ ಹುದ್ದೆಗಳು ಕೂಡಾ ಮಾರಾಟವಾಗಿವೆ. ಈ ಜನರು ಮಾರಾಟ ಮಾಡಬಹುದಾದ ಎಲ್ಲವನ್ನೂ ಮಾರಾಟ ಮಾಡುತ್ತಾರೆ ಎಂದು ಹೇಳಿದರು.

 ದ್ವೇಷ ಮತ್ತು ಪ್ರೀತಿಯ ನಡುವಿನ ಈ ಯುದ್ಧ ಹೊಸದಲ್ಲ. ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್‌ ಅವರು ನಡೆಸಿದ ಹೋರಾಟವೂ ಇದೇ. ಈ ಮಹಾನ್ ನಾಯಕರ ಧ್ವನಿಯೇ ಪ್ರತಿಧ್ವನಿಸುತ್ತಿದೆ. ಈ ನಾಯಕರಲ್ಲಿ ಯಾರೂ ಹಿಂಸೆ ಅಥವಾ ದ್ವೇಷವನ್ನು ಬೋಧಿಸಿಲ್ಲ ಎಂದರು. 

ಈ ಯಾತ್ರೆಯು ಬಿಜೆಪಿ-ಆರ್‌ಎಸ್‌ಎಸ್ ಹರಡುತ್ತಿರುವ ದ್ವೇಷ, ಹಿಂಸಾಚಾರ ಮತ್ತು ಕೋಪದ ವಿರುದ್ಧದ ಹೋರಾಟವಾಗಿದೆ. ದೇಶ ಇಬ್ಭಾಗವಾಗುವುದಿಲ್ಲ, ದೇಶ ಒಗ್ಗಟ್ಟಾಗಿ ನಿಲ್ಲುತ್ತದೆ ಎಂಬ ಸಂದೇಶವನ್ನು ಬಿಜೆಪಿಗೆ ನೀಡಲಿದೆ. ಈ ಸಂದೇಶ ಯಾತ್ರೆಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಯಾತ್ರೆಯಲ್ಲಿ ಯಾವುದೇ ಹಿಂಸೆ, ದ್ವೇಷ ಮತ್ತು ಕೋಪ ಇಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT