ಬಿ.ಎಲ್ ಸಂತೋಷ್ 
ರಾಜಕೀಯ

ಪ್ರತಿ ಕ್ಷೇತ್ರದಲ್ಲೂ ನಮ್ಮದೇ ಆದ ಆಡಳಿತ ಯಂತ್ರವಿರಬೇಕು: ಬಿ.ಎಲ್ ಸಂತೋಷ್

ನಮ್ಮದೇ ಸರ್ಕಾರವಿದೆ, ಆದರೆ ಆಡಳಿತ, ನ್ಯಾಯಾಂಗ, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮದೇ ಆದ ಆಡಳಿತ ಯಂತ್ರಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ.

ಹುಬ್ಬಳ್ಳಿ: ನಮ್ಮದೇ ಸರ್ಕಾರವಿದೆ, ಆದರೆ ಆಡಳಿತ, ನ್ಯಾಯಾಂಗ, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮದೇ ಆದ ಆಡಳಿತ ಯಂತ್ರಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ.

ಪ್ರಜ್ಞಾ ಪ್ರವಾಹ ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಡಾ. ಸಂತೋಷಕುಮಾರ ಪಿ.ಕೆ ಅನುವಾದಿಸಿರುವ ‘ಸ್ವರಾಜ್‌ –75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌ ಪ್ರತಿಯೊಂದು ಕ್ಷೇತ್ರದಲ್ಲೂ ಪಕ್ಷದ ಸ್ವಂತ ಯಂತ್ರವನ್ನು ಸ್ಥಾಪಿಸಲು ಸೈದ್ಧಾಂತಿಕ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. "ನಮ್ಮ ಸಿದ್ಧಾಂತವನ್ನು ಭದ್ರಪಡಿಸುವುದು ಮತ್ತು ಎಡ ಉದಾರವಾದಿಗಳಿಂದ ಪ್ರೋತ್ಸಾಹಿಸಲ್ಪಟ್ಟ ಹಲವಾರು ವಸಾಹತುಶಾಹಿ ಆಚರಣೆಗಳನ್ನು ಪ್ರಶ್ನಿಸುವುದು ಅವಶ್ಯಕವಾಗಿದೆ ಎಂದರು.

ನಾವು ಜಿಡಿಪಿ ಬೆಳವಣಿಗೆಗೆ ಮಾತ್ರವಲ್ಲ, ಉದ್ಯೋಗ ಸೃಷ್ಟಿಗೂ ಒತ್ತು ನೀಡುತ್ತೇವೆ. ನಾವು ನಿರುದ್ಯೋಗ ಬೆಳವಣಿಗೆಯ ಪರವಾಗಿಲ್ಲ ಎಂದು ಸಂತೋಷ್ ಹೇಳಿದ್ದಾರೆ. ವಿಷಯಗಳು ನಿಧಾನವಾಗಿ ಬದಲಾಗುತ್ತಿವೆ, ಆದರೆ ಅವುಗಳನ್ನು ತ್ವರಿತಗೊಳಿಸಲಾಗುತ್ತಿದೆ ಎಂದರು.

ಪ್ರಬಲವಾದ ನಾಯಕತ್ವ, ಪಕ್ಷದ ಸಂಘಟನಾತ್ಮಕ ಬೆಳವಣಿಗೆ ಮತ್ತು ಮಾಧ್ಯಮಗಳಿಗೆ, ಸಾಮಾಜಿಕ ಮಾಧ್ಯಮಗಳಿಗೆ ನಿರ್ದಿಷ್ಟವಾಗಿ ಜನರನ್ನು ಒಡ್ಡಿಕೊಳ್ಳುವುದು, ಜನರು ವಾತಾವರಣಕ್ಕೆ ಹೊಂದಿಕೊಳ್ಳುವಂತೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT