ಬಿ.ಎಲ್ ಸಂತೋಷ್ 
ರಾಜಕೀಯ

ಪ್ರತಿ ಕ್ಷೇತ್ರದಲ್ಲೂ ನಮ್ಮದೇ ಆದ ಆಡಳಿತ ಯಂತ್ರವಿರಬೇಕು: ಬಿ.ಎಲ್ ಸಂತೋಷ್

ನಮ್ಮದೇ ಸರ್ಕಾರವಿದೆ, ಆದರೆ ಆಡಳಿತ, ನ್ಯಾಯಾಂಗ, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮದೇ ಆದ ಆಡಳಿತ ಯಂತ್ರಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ.

ಹುಬ್ಬಳ್ಳಿ: ನಮ್ಮದೇ ಸರ್ಕಾರವಿದೆ, ಆದರೆ ಆಡಳಿತ, ನ್ಯಾಯಾಂಗ, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮದೇ ಆದ ಆಡಳಿತ ಯಂತ್ರಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ.

ಪ್ರಜ್ಞಾ ಪ್ರವಾಹ ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಡಾ. ಸಂತೋಷಕುಮಾರ ಪಿ.ಕೆ ಅನುವಾದಿಸಿರುವ ‘ಸ್ವರಾಜ್‌ –75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌ ಪ್ರತಿಯೊಂದು ಕ್ಷೇತ್ರದಲ್ಲೂ ಪಕ್ಷದ ಸ್ವಂತ ಯಂತ್ರವನ್ನು ಸ್ಥಾಪಿಸಲು ಸೈದ್ಧಾಂತಿಕ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. "ನಮ್ಮ ಸಿದ್ಧಾಂತವನ್ನು ಭದ್ರಪಡಿಸುವುದು ಮತ್ತು ಎಡ ಉದಾರವಾದಿಗಳಿಂದ ಪ್ರೋತ್ಸಾಹಿಸಲ್ಪಟ್ಟ ಹಲವಾರು ವಸಾಹತುಶಾಹಿ ಆಚರಣೆಗಳನ್ನು ಪ್ರಶ್ನಿಸುವುದು ಅವಶ್ಯಕವಾಗಿದೆ ಎಂದರು.

ನಾವು ಜಿಡಿಪಿ ಬೆಳವಣಿಗೆಗೆ ಮಾತ್ರವಲ್ಲ, ಉದ್ಯೋಗ ಸೃಷ್ಟಿಗೂ ಒತ್ತು ನೀಡುತ್ತೇವೆ. ನಾವು ನಿರುದ್ಯೋಗ ಬೆಳವಣಿಗೆಯ ಪರವಾಗಿಲ್ಲ ಎಂದು ಸಂತೋಷ್ ಹೇಳಿದ್ದಾರೆ. ವಿಷಯಗಳು ನಿಧಾನವಾಗಿ ಬದಲಾಗುತ್ತಿವೆ, ಆದರೆ ಅವುಗಳನ್ನು ತ್ವರಿತಗೊಳಿಸಲಾಗುತ್ತಿದೆ ಎಂದರು.

ಪ್ರಬಲವಾದ ನಾಯಕತ್ವ, ಪಕ್ಷದ ಸಂಘಟನಾತ್ಮಕ ಬೆಳವಣಿಗೆ ಮತ್ತು ಮಾಧ್ಯಮಗಳಿಗೆ, ಸಾಮಾಜಿಕ ಮಾಧ್ಯಮಗಳಿಗೆ ನಿರ್ದಿಷ್ಟವಾಗಿ ಜನರನ್ನು ಒಡ್ಡಿಕೊಳ್ಳುವುದು, ಜನರು ವಾತಾವರಣಕ್ಕೆ ಹೊಂದಿಕೊಳ್ಳುವಂತೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!