ದಲಿತ ಹಿರಾಳ ಕೊಲ್ಲಾರಪ್ಪ ಮನೆಯಲ್ಲಿ ಉಪಹಾರ ಸೇವನೆ 
ರಾಜಕೀಯ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಸಿಎಂ, ಮಾಜಿ ಸಿಎಂ

ಇನ್ನು ಕೇವಲ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದರೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ಕೈಗೊಂಡಿದೆ. 

ವಿಜಯನಗರ: ಇನ್ನು ಕೇವಲ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದರೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ಕೈಗೊಂಡಿದೆ. 

ಯಾತ್ರೆಯ ಅಂಗವಾಗಿ ಇಂದು ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯ ದಲಿತ ಕುಟುಂಬದ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿದ ಸಿಎಂ ಮತ್ತು ಮಾಜಿ ಸಿಎಂ ಅಲ್ಲಿ ಉಪಹಾರ ಸೇವಿಸಿ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್, ಶಾಸಕ ರಾಜುಗೌಡ ಹಾಜರಿದ್ದರು.

ಕೊಲ್ಲಾರಪ್ಪ ಮಕ್ಕಳು ಸಿಎಂಗೆ ಉಪಹಾರ ಸಿದ್ಧ ಮಾಡಿದ್ದು, ರೇಣುಕಾ, ಹುಲಿಗೆಮ್ಮ, ಅಂಬಮ್ಮರಿಂದ ಉಪಹಾರ ತಯಾರಿ ಮಾಡಿದ್ಧಾರೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಮಂಡಕ್ಕಿ‌ ವಗ್ಗರಣೆ, ಉಪ್ಪಿಟ್ಟು, ಕೇಸರಿಬಾತ್, ಮಿರ್ಚಿ, ಚಹಾ ಸೇವಿಸಿದರು. ಸಿಎಂ, ಮಾಜಿ ಸಿಎಂ ಆಗಮನ ಹಿನ್ನೆಲೆಯಲ್ಲಿ ಇಡೀ ಅಂಬೇಡ್ಕರ್ ಕಾಲೊನಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. 

ಬಿಜೆಪಿ ಜನಸಂಕಲ್ಪ ಯಾತ್ರೆ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿದೆ. ವಿಜಯನಗರ ನಂತರ ಕೊಪ್ಪಳ ಜಿಲ್ಲೆಯಲ್ಲಿ ಸಂಕಲ್ಪ ಯಾತ್ರೆ ನಡೆಯಲಿದೆ. ಸಿಎಂ ಬೊಮ್ಮಾಯಿ ಕೊಪ್ಪಳದ ಕುಷ್ಟಗಿಯಲ್ಲಿ ಸಮಾವೇಶ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT