ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕಾಂಗ್ರೆಸ್ ಮುಖಂಡ ನಾಗೇಂದ್ರ ನಾಯಕ್ ಅವರ ನಿವಾಸದಲ್ಲಿ ಸಾಕಿರುವ ಹಳ್ಳಿಕಾರ್ ತಳಿಯ ಹೋರಿಗಳೊಂದಿಗೆ ಸಿದ್ದರಾಮಯ್ಯ 
ರಾಜಕೀಯ

ಯಡಿಯೂರಪ್ಪನವರ ಮಾತು ಕೀಳು ಅಭಿರುಚಿಯನ್ನು ತೋರಿಸುತ್ತದೆ, ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯ

ಚಿತ್ರದುರ್ಗದಲ್ಲಿ ಭಾರತ್ ಜೋಡೋ ಪಾದಯಾತ್ರೆ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರಂತೆ ಕೀಳು ಅಭಿರುಚಿಯ ಮಾತುಗಳನ್ನು ನಾನು ಆಡಲ್ಲ, ಅಲ್ಲದೆ ಯಡಿಯೂರಪ್ಪರಿಂದ ಇಂತಾ ಮಾತುಗಳನ್ನು ನಿರೀಕ್ಷಿಸಿರಲಿಲ್ಲ, ಬಿಎಸ್​ವೈಗೆ ವಯಸ್ಸಾಗಿರುವುದರಿಂದ ಆ ರೀತಿ ಮಾತಾಡ್ತಿದ್ದಾರೆ ಎಂದು ಹೇಳಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭಾರತ್ ಜೋಡೋ ಪಾದಯಾತ್ರೆ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರಂತೆ ಕೀಳು ಅಭಿರುಚಿಯ ಮಾತುಗಳನ್ನು ನಾನು ಆಡಲ್ಲ, ಅಲ್ಲದೆ ಯಡಿಯೂರಪ್ಪರಿಂದ ಇಂತಾ ಮಾತುಗಳನ್ನು ನಿರೀಕ್ಷಿಸಿರಲಿಲ್ಲ, ಬಿಎಸ್​ವೈಗೆ ವಯಸ್ಸಾಗಿರುವುದರಿಂದ ಆ ರೀತಿ ಮಾತಾಡ್ತಿದ್ದಾರೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮ ಇಲ್ಲ ಎಂದು ನಾನು ಹೇಳಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. 

ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ್ದ ಬಿ ಎಸ್ ಯಡಿಯೂರಪ್ಪ, ಮೋದಿ ಪಾದದ ಧೂಳಿಗೂ ಸಿದ್ದರಾಮಯ್ಯ ಸಮನಲ್ಲ ಎಂದು ಹೇಳಿದ್ದರು. ಇದಕ್ಕೆ ಪಾದಯಾತ್ರೆ ವೇಳೆ ಚಿತ್ರದುರ್ಗದಲ್ಲಿ ಸಿದ್ದರಾಮಯ್ಯನವರಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ. ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗುತ್ತಾ? ಪ್ರಧಾನ ಮಂತ್ರಿ ಅವರು. ಅದೇ ರೀತಿ ನೆಹರೂ ಕಾಲಿಗೂ ಯಡಿಯೂರಪ್ಪ ಸಮನಲ್ಲ ಅಂತಾ ಹೇಳಬಹುದಲ್ವಾ? ಆದರೆ ನಾನು ಅವರಿಗೆ ಆ ರೀತಿ ಹೇಳಲ್ಲ. ಅದು ಕೀಳು ಅಭಿರುಚಿ. ಸಿಎಂ ಆದವರು ಆ ತರಹ ಮಾತನಾಡಬಾರದು ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ ಒಬ್ಬ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಮಾತನಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅದಕ್ಕಾಗಿ ಅವರಿಗೆ ಬಹುಶಃ ಅರಳೋ ಮರುಳೋ ಆಗಿದೆ. ಹೀಗಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT