ರಾಹುಲ್ ಗಾಂಧಿ ಪಾದಯಾತ್ರೆ 
ರಾಜಕೀಯ

ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆ: ಮೆಚ್ಚಿನ ನಾಯಕನ ಜೊತೆ ಬೆಂಬಲಿಗರ ದಣಿವರಿಯದ ಯಾತ್ರೆ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕೇರಳದಿಂದ ಸುಮಾರು 117 ಪಾದಯಾತ್ರಿಗಳು ಆಗಮಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕೇರಳದಿಂದ ಸುಮಾರು 117 ಪಾದಯಾತ್ರಿಗಳು ಆಗಮಿಸಿದ್ದಾರೆ.

ಕಾಶ್ಮೀರದಿಂದ- ಕನ್ಯಾಕುಮಾರಿ ವರೆಗಿನ 3500 ಕಿಮೀ ದೂರದ ಪಾದಯಾತ್ರೆ ಸುಮಾರು 150 ದಿನಗಳ ಕಾಲ ನಡೆಯಲಿದೆ, ಇದೊಂದು ಕಠಿಣ ಪಾದಯಾತ್ರೆಯಾಗಿದ್ದು ದಿಗ್ವಿಜಯ್ ಸಿಂಗ್  ಭವಿಷ್ಯ ನುಡಿದಂತೆ ಪಾದಯಾತ್ರೆ ನಂತರ ರಾಹುಲ್ ಗಾಂಧಿಹೊಸ ಅವತಾರದಲ್ಲಿ ಬರಲಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಿರುವ ಯಾತ್ರಿಗಳು ವಿಶಿಷ್ಟ ಅನುಭವ ಪಡೆಯುತ್ತಿದ್ದಾರೆ. 35 ದಿನಗಳಲ್ಲಿ 800 ಕಿಮೀ ಕ್ರಮಿಸಿರುವ ಯಾತ್ರಿಗಳು ಕುಟುಂಬಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ, ಆದರೆ ಯಾರು ಯಾತ್ರೆ ಕೈ ಬಿಡಲು ಸಿದ್ಧರಿಲ್ಲ.

ಮುಂಜಾನೆಯಿಂದ ಮುಸ್ಸಂಜೆಯವರೆಗೆ ರಾಹುಲ್ ಗಾಂಧಿ ಜೊತೆ ಇರುವ 60 ಯಾತ್ರಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಕಂಟೈನರ್‌ಗಳಲ್ಲಿ ತಲಾ 12 ಹಾಸಿಗೆಗಳನ್ನು ಟ್ರಕ್‌ಗಳಲ್ಲಿ ಜೋಡಿಸಲಾಗಿದೆ. ವಿವಿಧ ರಾಜ್ಯಗಳ ಯಾತ್ರಿಗಳನ್ನು ಒಟ್ಟಿಗೆ ಸೇರಿಸಲಾಗುತ್ತದೆ, ಅವರು ಊಟದ ಸಮಯದಲ್ಲಿ ಹಲವು ವಿಷಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ನಾವು ಮನೆಯಿಂದ ದೂರವಾಗಿದ್ದೇವೆ ಎಂದು ನಮಗೆ ಅನಿಸುವುದಿಲ್ಲ ಮತ್ತು ಮನೆ ಕೆಲಸದ ಪ್ರಶ್ನೆಯೇ ಇಲ್ಲ. ನಾವು ಇಲ್ಲಿ ಕುಟುಂಬದವರಾಗಿದ್ದೇವೆ ಎಂದು ರಾಜಸ್ಥಾನದ ಸೀತಾರಾಮ್ ಲಾಂಬಾ ಹೇಳಿದರು.

ಹಳ್ಳಿಯೊಂದರ ‘ಸರ್ಪಂಚ್’ ಆಗಿರುವ ಪಂಜಾಬ್‌ನ ಅಮೃತಸರದ ಮನೋಜ್ ಸಿಂಗ್ ಅವರಿಗೆ ಇದು ‘ಭಾರತ ದರ್ಶನ ಯಾತ್ರೆ’ ಎಂದು ಅನಿಸಿದೆ. ಕೇರಳದ ಕೆ ಟಿ ಬಿನಿ,  ಸಹ ಪ್ರಯಾಣಿಕರಾಗಿದ್ದಾರೆ ಇಬ್ಬರೂ ಉತ್ತಮ ಬಾಂಧವ್ಯವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ. ನಾನು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದೇನೆ ಎಂಬ ಭಾವನೆ ಉಂಟಾಗಿದೆ ಎಂದು ಮಣಿಪುರದ ಪಕ್ಷದ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಕಿಮ್ ಹೇಳಿದ್ದಾರೆ.

ಯಾತ್ರಿಗಳು ಮಧ್ಯಂತರದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸಂವಹನ ನಡೆಸಲು ಅವಕಾಶ ಸಿಗುತ್ತಿದೆ. ವಿವಿಧ ವಿಷಯಗಳ ಬಗ್ಗೆ, ವಿಶೇಷವಾಗಿ ಮಹಾತ್ಮ ಗಾಂಧಿಯವರ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಭಾರತೀಯ ಯುವ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ರಾಹುಲ್ ರಾವ್ ಹೇಳಿದ್ದಾರೆ. ಒಂದು ದಶಕದ ಹಿಂದೆ ರಾಹುಲ್ ಗಾಂಧಿ  ಹರಿಯಾಣ ಯುವ ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು.

ರಾಹುಲ್ ಗಾಂಧಿ ಬಳಿ ಇದೇ ರೀತಿಯ ಕಂಟೈನರ್ ಇದೆ ಆದರೆ ನಾಯಕರನ್ನು ಭೇಟಿ ಮಾಡಲು ಸೌಲಭ್ಯವಿದೆ. ಯಾತ್ರೆಯಲ್ಲಿ ಪಾಲ್ಗೊಳ್ಳುವ ಕಾಂಗ್ರೆಸ್‌ನ ಪ್ರಮುಖ ನಾಯಕರು ಕಂಟೈನರ್‌ಗಳಲ್ಲಿ ಮಲಗುತ್ತಾರೆ ಮತ್ತು ಯಾತ್ರಿಗಳಿಗೆ ಅವರೊಂದಿಗೆ ಸಂವಹನ ನಡೆಸಲು ಅವಕಾಶವಿದೆ.

ಯಾತ್ರಿಗಳು ಮುಂಜಾನೆ 4 ಗಂಟೆಗೆ ಏಳುತ್ತಾರೆ, ತಣ್ಣೀರಿನ ಸ್ನಾನ ಮಾಡಿ ಮತ್ತು ದ್ವಜ ವಂದನೆ, ರಾಷ್ಟ್ರಗೀತೆ ಮತ್ತು ವಂದೇ ಮಾತರಂಗೆ ಸಿದ್ಧರಾಗುತ್ತಾರೆ, ನಂತರ ಬೆಳಿಗ್ಗೆ 6.30 ರ ಸುಮಾರಿಗೆ ರಾಹುಲ್ ಅವರೊಂದಿಗೆ ರಸ್ತೆಗೆ ಇಳಿಯುತ್ತಾರೆ. ರಾತ್ರಿ 10.30ರ ಸುಮಾರಿಗೆ ಅವರು ಮಲಗುತ್ತಾರೆ ಎಂದು ವಿವರ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT