ರಾಹುಲ್ ಗಾಂಧಿ 
ರಾಜಕೀಯ

ದೇಶದ ಬಗ್ಗೆ ಏನೂ ತಿಳಿಯದ ರಾಹುಲ್ ಗಾಂಧಿ ಪ್ರಧಾನಿಯಾಗಲು ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ

ರಾಹುಲ್‌ಗಾಂಧಿ ಪ್ರಧಾನಿಯಲ್ಲ ಮುಂದೆಯೂ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭವಿಷ್ಯ ನುಡಿದಿದ್ದಾರೆ.

ಯಾದಗಿರಿ: ರಾಹುಲ್‌ಗಾಂಧಿ ಪ್ರಧಾನಿಯಲ್ಲ ಮುಂದೆಯೂ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭವಿಷ್ಯ ನುಡಿದಿದ್ದಾರೆ.

ಯಾದಗಿರಿಯ ಹುಣಸಗಿಯಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ನಮ್ಮ ಅಭಿವೃದ್ದಿ ಕೆಲಸಗಳ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯದಲ್ಲಿ ಕೆಲಸ ಪಡೆಯಬೇಕು ಅಂದ್ರೆ ಲಂಚ ಕೊಡಬೇಕು ಅಂತ ಹೇಳಿದ್ದಾರೆ.

ಕಾಂಗ್ರೆಸ್  ಅವಧಿಯಲ್ಲಿ ಆಗಿರುವ ಭ್ರಷ್ಟಾಚಾರಗಳ ಬಗ್ಗೆಯೂ ಅವರಿಗೆ ಗೊತ್ತಿಲ್ಲ. ಹೀಗಾಗಿ ಅವರಿಗೆ ಸಿದ್ದರಾಮಯ್ಯ ಅವಧಿಯ ಭ್ರಷ್ಟಾಚಾರದ ಫೈಲ್ ಕಳುಹಿಸುತ್ತಿದ್ದೇನೆ. ಭ್ರಷ್ಟ್ರರನ್ನ ಕಟ್ಟಿಕೊಂಡು ನಡೀತಿದ್ದೀಯಾ, ಇವರ ಮೇಲೇನಾದರೂ ಕ್ರಮ ತೆಗೆದುಕೊಳ್ಳುತ್ತೀರಾ? ಅಂತ ಫೈಲ್ ಕಳುಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ದೇಶದ ಬಗ್ಗೆ ಏನೂ ಗೊತ್ತಿಲ್ಲ, ಬೇರೆ ಬೇರೆ ರಾಜ್ಯಗಳಲ್ಲಿ ಮಾತನಾಡುವ ಭಾಷೆಯೂ ಗೊತ್ತಿಲ್ಲ, ಹೀಗಾಗಿ ಪ್ರಧಾನಿ ಆಗುವುದಿಲ್ಲ.  ಕಾಂಗ್ರೆಸ್ ಕಾರ್ಯಕರ್ತರ 'ಪೇಸಿಎಂ' ಅಭಿಯಾನದ ಕುರಿತು ಬೊಮ್ಮಾಯಿ, ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇಲ್ಲ, ಹೀಗಾಗಿ ಆಂದೋಲನ ಮಾಡಲಿ, ರಾಜ್ಯದ ಅಭಿವೃದ್ಧಿಯ ಹೊಣೆ ನಮ್ಮ ಮೇಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT