ಜಿ.ಟಿ. ದೇವೇಗೌಡ 
ರಾಜಕೀಯ

ಜಿಟಿ ದೇವೇಗೌಡಗೆ ಮೈಸೂರು ಉಸ್ತುವಾರಿ, ಹುಣಸೂರಿನಿಂದ ಪುತ್ರ ಹರೀಶ್‌ಗೌಡಗೆ ಜೆಡಿಎಸ್ ಟಿಕೆಟ್‌

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತು ಅವರ ಪುತ್ರ ಹರೀಶ್‌ಗೌಡ...

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತು ಅವರ ಪುತ್ರ ಹರೀಶ್‌ಗೌಡ ಅವರಿಗೆ ಜೆಡಿಎಸ್ ಟಿಕೆಟ್ ಖಚಿತವಾಗಿದೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಮತ್ತೆ ಚಾಮುಂಡೇಶ್ವರಿಯಿಂದ ಸ್ಪರ್ಧಿಸುತ್ತೇನೆ ಮತ್ತು ನನ್ನ ಮಗ(ಜಿ.ಡಿ.ಹರೀಶ್‌ಗೌಡ)ನಿಗೆ ಹುಣಸೂರು ‌ಕ್ಷೇತ್ರದಿಂದ ಟಿಕೆಟ್ ನೀಡುವ ಭರವಸೆ ಸಿಕ್ಕಿದೆ ಎಂದು ಜಿಟಿ ದೇವೇಗೌಡ ಅವರ ಶುಕ್ರವಾರ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಪಕ್ಷದ ನಾಯಕರು ನನಗೆ ಮೈಸೂರು ಉಸ್ತುವಾರಿ ನೀಡಿದ್ದಾರೆ. ನಾನು ಮತ್ತೊಮ್ಮೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಮಗ ಹರೀಶ್ ಗೌಡ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕೆ ಆರ್ ನಗರದಿಂದ ಸಾ ರಾ ಮಹೇಶ್, ಟಿ ನರಸೀಪುರದಿಂದ ಅಶ್ವಿನ್, ಪಿರಿಯಾಪಟ್ಟಣದಿಂದ ಮಹಾದೇವ ಮತ್ತು ಎಚ್ ಡಿ ಕೋಟೆಯಿಂದ ಸಿದ್ದಣ್ಣ ಇಲ್ಲವೇ ಅವರ ಮಗ ಸ್ಪರ್ಧಿಸಲಿದ್ದಾರೆಂದು ಜಿಟಿಡಿ ಹೇಳಿದರು.

ಕಳೆದ ಮೂರು ವರ್ಷಗಳಿಂದಲೂ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ಮನವೊಲಿಸುವಲ್ಲಿ ಜೆಡಿಎಸ್‌ ವರಿಷ್ಠಿ ಎಚ್‌.ಡಿ.ದೇವೇಗೌಡ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT