ಸಿದ್ದರಾಮಯ್ಯ 
ರಾಜಕೀಯ

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಮಸೂದೆ ಜಾರಿಗೆ ಅಧಿವೇಶನ ಕರೆಯಿರಿ: ಸರ್ಕಾರಕ್ಕೆ ಸಿದ್ದರಾಮಯ್ಯ

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಬದಲು ಎರಡು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ಕರೆದು ವಿಧೇಯಕವನ್ನು ಅಂಗೀಕರಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ರಾಯಚೂರು: ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಬದಲು ಎರಡು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ಕರೆದು ವಿಧೇಯಕವನ್ನು ಅಂಗೀಕರಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. 

ಭಾರತ್ ಜೋಡೋ ಪಾದಯಾತ್ರೆ ವೇಳೆ ರಾಯಚೂರಿನ ಗಿಲ್ಲೆಸುಗೂರಿನಲ್ಲಿ ಮಾತನಾಡಿದ ಅವರು, ಡಿಸೆಂಬರ್‌ವರೆಗೆ ಅಧಿವೇಶನಕ್ಕೆ ಯಾಕೆ ಕಾಯಬೇಕು. ಒಂದು ವಾರದ ಒಳಗೆ ಕರೆಯಿರಿ. ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ. ಅಧಿವೇಶನದಲ್ಲಿ ಮಸೂದೆ ಅಂಗೀಕಾರವಾದ ಮೇಲೆ ದೆಹಲಿಯಲ್ಲಿ ಕುಳಿತು 9 ಶೆಡ್ಯೂಲ್ ಮಾಡಿ. ಅಡ್ಡ ದಾರಿ ಹಿಡಿಯಬೇಡಿ ಎಂದು ಹೇಳಿದರು. 

ಇದೇ ವೇಳೆ ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್ ವಿರುದ್ಧವಾಗಿದೆ ಎಂಬ ಬೊಮ್ಮಾಯಿ ಆರೋಪವನ್ನು ತಳ್ಳಿಹಾಕಿದ ಅವರು, ನಮ್ಮ ಸರ್ಕಾರ, ಸಮ್ಮಿಶ್ರ ಸರ್ಕಾರ ಇದ್ದಾಗ ಪ್ರಿಯಾಂಕ್ ಖರ್ಗೆ ಸಚಿವರಿದ್ದಾಗ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆಯಾಯಿತು. ಸಮಿತಿ ವರದಿ ಬಂದಾಗ ನಮ್ಮ ಸರ್ಕಾರ ಇರಲಿಲ್ಲ. ವರದಿ ಕೊಟ್ಟು ಎರಡು ವರ್ಷದ ಮೂರು ತಿಂಗಳಿಗೂ ಜಾಸ್ತಿಯಾಗಿದೆ. ವರದಿ ಬಂದಾಗಿನಿಂದಾಗಲೂ ಎಸ್‌ಸಿ, ಎಸ್‌ಟಿ ಶಾಸಕರು‌ ಧ್ವನಿ ಎತ್ತಿದ್ದರು. ಕೊನೆ ಅಧಿವೇಶನದಲ್ಲಿ ಶಾಸಕರು ಬಾವಿಗಿಳಿದು ಹೋರಾಟ ಮಾಡಿದಾಗ ಸಿಎಂ ಸರ್ವಪಕ್ಷ ಶಾಸಕರ ಸಭೆ ಕರೆಯುತ್ತೇನೆ ಅಂತ ಹೇಳಿದರು. ಎಸ್‌ಟಿಗೆ ಶೇ.3 ರಿಂದ 7ರಷ್ಟು ಹೆಚ್ಚು ಮಾಡಬೇಕು. ಎಸ್‌ಸಿಗೆ ಶೇ.15 ರಿಂದ 17ರಷ್ಟು ಆಗಬೇಕು. ಒಟ್ಟು ಶೇ.24 ಆಗಬೇಕು ಅಂತ ವರದಿಯಲ್ಲಿದೆ. ಮೀಸಲಾತಿ ಸಾಮಾನ್ಯವಾಗಿ ಶೇ.50 ಗಿಂತ ಹೆಚ್ಚಾಗಬಾರದು ಅನ್ನೋ ಜಡ್ಜ್‌ಮೆಂಟ್ ಉಲ್ಲಂಘನೆಯಾಗುತ್ತದೆ. ಮೀಸಲಾತಿ ಪ್ರಮಾಣ ಹೆಚ್ಚಾಗಿರುವುದರಿಂದ ಇದಕ್ಕೆ ಸಂವಿಧಾನ ತಿದ್ದುಪಡಿ ಆಗಬೇಕು. ಒಂದು ವಾರ ದೆಹಲಿಯಲ್ಲಿ ಕೂತು 9 ಶೆಡ್ಯೂಲ್‌ನಲ್ಲಿ ಸೇರಿಸಿ, ಸುಗ್ರೀವಾಜ್ಞೆ ಬೇಡ ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT