ಬಸವರಾಜ ಬೊಮ್ಮಾಯಿ 
ರಾಜಕೀಯ

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕಲಬುರಗಿ ಪ್ರವಾಸ ರದ್ದುಪಡಿಸಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ನಾಳೆ ಕಲಬುರಗಿ ಜಿಲ್ಲೆಗೆ ಸಮಯ ನೀಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.

ಇನ್ನು ಇಂದಿನಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಬೇಕಿತ್ತು. ಆದರೆ ಆನಂದ್ ಮಾಮನಿ ವಿಧಿವಶ ಹಿನ್ನೆಲೆ ಉತ್ಸವ ರದ್ದಾಗುತ್ತಾ? ಮುಂದೂಡಲಾಗುತ್ತಾ ಎಂದು ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ನಿರ್ಧರಿಸಲಾಗಿತ್ತು. ಇಂದು ಸಂಜೆ ಆಯೋಜಿಸಿದ್ದ ಕಿತ್ತೂರು ಉತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಬೇಕಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT