ಬಸವರಾಜ ಬೊಮ್ಮಾಯಿ 
ರಾಜಕೀಯ

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕಲಬುರಗಿ ಪ್ರವಾಸ ರದ್ದುಪಡಿಸಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ನಾಳೆ ಕಲಬುರಗಿ ಜಿಲ್ಲೆಗೆ ಸಮಯ ನೀಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.

ಇನ್ನು ಇಂದಿನಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಬೇಕಿತ್ತು. ಆದರೆ ಆನಂದ್ ಮಾಮನಿ ವಿಧಿವಶ ಹಿನ್ನೆಲೆ ಉತ್ಸವ ರದ್ದಾಗುತ್ತಾ? ಮುಂದೂಡಲಾಗುತ್ತಾ ಎಂದು ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ನಿರ್ಧರಿಸಲಾಗಿತ್ತು. ಇಂದು ಸಂಜೆ ಆಯೋಜಿಸಿದ್ದ ಕಿತ್ತೂರು ಉತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಬೇಕಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT