ಎಚ್.ವಿಶ್ವನಾಥ್ 
ರಾಜಕೀಯ

ರಾಜಕೀಯ ನಿಂತ ನೀರಲ್ಲ, ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು: 'ಹಳ್ಳಿಹಕ್ಕಿ' ಚಿತ್ತ ಕಾಂಗ್ರೆಸ್ ನತ್ತ; 'ಕೈ' ಸೇರಲು ವಿಶ್ವನಾಥ್ ಒಲವು!

ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಅಡಗೂರು ಎಚ್‌. ವಿಶ್ವನಾಥ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ.

ಮೈಸೂರು: ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಅಡಗೂರು ಎಚ್‌. ವಿಶ್ವನಾಥ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್‌, ಸದ್ಯದಲ್ಲೇ ಬೆಂಗಳೂರಿನಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮತ್ತೆ ಕಾಂಗ್ರೆಸ್ ಸೇರುವಿರಾ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ‘ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇವತ್ತಿನ ರಾಜಕಾರಣ  ಹೀಗೆಯೇ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ವಿಶ್ವನಾಥ್ ಹೇಳಿದರು.ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಯಾವ ಪಕ್ಷಗಳೂ ಮುಳುಗುವ ಹಡಗುಗಳಲ್ಲ. ಅವು ಜನರೊಂದಿಗೆ ತೇಲುವಂಥವು; ಇರುವಂಥವು’ ಎಂದರು.

ಈಗ ಬಿಜೆಪಿಯಲ್ಲಿರುವ ವಿಶ್ವನಾಥ್‌ ಆ ಪಕ್ಷದಿಂದಲೂ ದೂರ ಸರಿದಿದ್ದಾರೆ. ತಮ್ಮ ಪಕ್ಷದ ಸರಕಾರ ಹಾಗೂ ಸಚಿವರನ್ನು ಟೀಕಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯವಾಗಿ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ. ವಿಶ್ವನಾಥ್‌ ಮೂಲತಃ ಕಾಂಗ್ರೆಸ್ಸಿಗರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT