ಚೇತನ್ ಕುಮಾರ್ 
ರಾಜಕೀಯ

'ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಇನ್ನೊಂದರ ಅಗತ್ಯವಿಲ್ಲ’

ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣೇಶನ ಚಿತ್ರ ಮುದ್ರಿಸಬೇಕು ಎಂಬ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಹೇಳಿಕೆಗೆ ನಟ ಚೇತನ್ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣೇಶನ ಚಿತ್ರ ಮುದ್ರಿಸಬೇಕು ಎಂಬ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಹೇಳಿಕೆಗೆ ನಟ ಚೇತನ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ಫೋಟೋಗಳನ್ನು ಮುದ್ರಿಸಿ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಆಗ್ರಹಿಸಿದ್ದಾರೆ. ಇದರಿಂದ ದೇಶದ ಆರ್ಥಿಕತೆ ಸುಧಾರಿಸುತ್ತದೆ ಎಂದು ಕೂಡ ವಾದಿಸಿದ್ದಾರೆ.

ಮುಂದುವರಿದು, ‘ಇಂತಹ ಅಸಾಂವಿಧಾನಿಕ, ಮೌಢ್ಯಗಳ ಹೇರಿಕೆಯನ್ನು ಕೇಜ್ರಿವಾಲ್ ಅವರು ನಿಲ್ಲಿಸಬೇಕು. ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ. ಇನ್ನೊಂದರ ಅಗತ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅರವಿಂದ ಕೇಜ್ರಿವಾಲ್‌, ‘ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಭಾವಚಿತ್ರದ ಜತೆಗೆ ಲಕ್ಷ್ಮಿದೇವಿ, ಗಣೇಶನ ಫೋಟೊಗಳನ್ನು ಹಾಕಬೇಕೆಂಬುದು ನನ್ನ ಬಯಕೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದರು.

‘ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಕಷ್ಟು ಪ್ರಯತ್ನಗಳನ್ನು ಪಡಬೇಕಿದೆ. ನಾವು ಎಷ್ಟೇ ಪ್ರಯತ್ನಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯದೇ ಇರುವುದರಿಂದ ದೇವರ ಆಶೀರ್ವಾದ ಬೇಕಿರುತ್ತದೆ. ಅದಕ್ಕಾಗಿ ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶ ದೇವರ ಭಾವಚಿತ್ರಗಳಿದ್ದರೆ ಇಡೀ ದೇಶಕ್ಕೆ ಆಶೀರ್ವಾದ ಸಿಗುತ್ತದೆ’ ಎಂದು ಕೇಜ್ರಿವಾಲ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RSS ನೋಂದಣಿ ಬಗ್ಗೆ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ: ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?

ಮಧ್ಯಪ್ರಾಚ್ಯ ಸಂಘರ್ಷ ಅಂತ್ಯ: ಅಮೆರಿಕ-ಇರಾನ್ ಒಪ್ಪಂದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ; ಹಾರ್ಮುಜ್ ಜಲಸಂಧಿ ಪುನರಾರಂಭಕ್ಕೆ ಸಂತಸ

ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ​

ಶಾಂತಿ ಒಪ್ಪಂದದ ಭಾಗವಾಗಿ ಅಮೆರಿಕದಿಂದ ಇರಾನಿನ 12 ಬಿಲಿಯನ್ ಡಾಲರ್ ಸಂಪತ್ತು ಬಿಡುಗಡೆ ಸಾಧ್ಯತೆ

SCROLL FOR NEXT