ಮೋರ್ಬಿ ಸೇತುವೆ ಕುಸಿತ 
ರಾಜಕೀಯ

ಮೊರ್ಬಿ ಸೇತುವೆ ಕುಸಿತ: ಇದು ಗುಜರಾತ್ ಮಾಡೆಲ್‌ನ ಆಕ್ಟ್ ಆಫ್ ಫ್ರಾಡ್ ಅಲ್ಲವೇ- ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತಿನ ಮೊರ್ಬಿ ಕೇಬಲ್ ಸೇತುವೆ ಕುಸಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ. 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತಿನ ಮೊರ್ಬಿ ಕೇಬಲ್ ಸೇತುವೆ ಕುಸಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ. 

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಮೊರ್ಬಿ ತೂಗುಸೇತುವೆ ಕುಸಿತದಲ್ಲಿ 100ಕ್ಕೂ ಹೆಚ್ಚು ಸಾವುಗಳಾದ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲೊಂದು. ದುರಂತಗಳನ್ನು ಚುನಾವಣೆಗೆ ಬಳಸುವ ಪ್ರಧಾನಿ ಈ ದುರಂತಕ್ಕೆ ಮೌನೇಂದ್ರ ಮೋದಿಯಾಗಿದ್ದಾರೆ ಎಂದು ಟೀಕಿಸಿದೆ.

ಇದು ಗುಜರಾತ್ ಮಾಡೆಲ್‌ನ ಆಕ್ಟ್ ಆಫ್ ಫ್ರಾಡ್ ಅಲ್ಲವೇ? 40 ಪರ್ಸೆಂಟ್‌ "ಒಂದು ದೇಶ ಒಂದು ಕಮಿಷನ್ ಎಂದು ಜಾರಿಯಾಗಿದೆಯೇ? ಎಂದು ಪ್ರಶ್ನಿಸಿದೆ.

ಮೊರ್ಬಿ ತೂಗುಸೇತುವೆಯನ್ನು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದೆ ಸಾರ್ವಜನಿಕ ಪ್ರವೇಶಕ್ಕೆ ಬಿಡಲಾಗಿತ್ತು. ಅನುಭವವಿಲ್ಲದ ಗಡಿಯಾರ ತಯಾರಿಕಾ ಕಂಪೆನಿಗೆ ದುರಸ್ತಿ ಕೆಲಸ ವಹಿಸಲಾಗಿತ್ತು. ಟೆಂಡರ್ ಪ್ರಕ್ರಿಯೆಯಲ್ಲಿ ಕಂಪೆನಿಯ ಅನುಭವ ಪರಿಗಣಿಸಿರಲಿಲ್ಲವೇಕೆ? ಗುಜರಾತಿನಲ್ಲೂ 40 ಪರ್ಸೆಂಟ್ ಸರ್ಕಾರ ಸ್ಥಾಪಿಸಿದ್ದೀರಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ.

ಇನ್ನೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ದಮ್ಮು ತಾಕತ್ತಿನ ಭಾಷಣ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್,  ಮುಖ್ಯಮಂತ್ರಿಗಳೇ, ಸಿನೆಮಾ ಗುಂಗು ಬಿಟ್ಟು ವಾಸ್ತವ ಜಗತ್ತಿನಲ್ಲಿ ಕಣ್ಬಿಟ್ಟು ನೋಡಿ, ರಸ್ತೆ ಗುಂಡಿಗಳು ಕಾಣುತ್ತವೆ. ಪ್ರಾಣ ಬಿಟ್ಟವರ ಕುಟುಂಬದ ರೋಧನೆ ಕಾಣುತ್ತದೆ, ನಿಮ್ಮ ವೈಫಲ್ಯಗಳು ಕಾಣುತ್ತವೆ ಎಂದು ಕಾಂಗ್ರೆಸ್ ಹೇಳಿದೆ.

ಬೆಂಗಳೂರು ಉಸ್ತುವಾರಿಗಾಗಿ ಕಿತ್ತಾಡುವ ಸಚಿವರು ರಸ್ತೆಗುಂಡಿ ಮುಚ್ಚುವ ವಿಚಾರದಲ್ಲಿ ಅದೇ ಹೋರಾಟ ತೋರುತ್ತಿಲ್ಲವೇಕೆ? 'ಬೊಮ್ಮಾಯಿ ವರ್ಷನ್ ಅಚ್ಛೆ ದಿನಗಳ' ಭಾಷಣ ಕುಟ್ಟುವ ಬೊಮ್ಮಾಯಿ ಅವರೇ, ಕನಿಷ್ಠ ರಸ್ತೆ ಗುಂಡಿಗಳನ್ನು ಮುಚ್ಚಲು ಸಹ ನಿಮಗೆ ದಮ್ಮು ತಾಕತ್ತು ಇಲ್ಲದಾಗಿರುವುದೇಕೆ? ನಿಮ್ಮ ಪ್ರಲಾಪ ಮೈಕ್ ಮುಂದೆ ಮಾತ್ರವೇ? ಎಂದು ಟೀಕಾ ಪ್ರಹಾರ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT