ಸಿದ್ದರಾಮಯ್ಯ 
ರಾಜಕೀಯ

ಮೊರ್ಬಿ ಸೇತುವೆ ಕುಸಿತ; ಈಗ ದೇವರು ಯಾರಿಗೆ ನೀಡಿದ ಸಂದೇಶ ಮೋದಿ ಅವರೇ?: ಸಿದ್ದರಾಮಯ್ಯ

ಗುಜರಾತ್​ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 141 ಮಂದಿ ಮೃತಪಟ್ಟಿದ್ದು, ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ. ಆದರೆ 2016ರಲ್ಲಿ ಕೋಲ್ಕತಾದಲ್ಲಿ ಸೇತುವೆ ಕುಸಿದಾಗ ಪ್ರಧಾನಿ ಮೋದಿ ಅವರಾಡಿದ್ದ...

ಬೆಂಗಳೂರು: ಗುಜರಾತ್​ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 141 ಮಂದಿ ಮೃತಪಟ್ಟಿದ್ದು, ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ. ಆದರೆ 2016ರಲ್ಲಿ ಕೋಲ್ಕತಾದಲ್ಲಿ ಸೇತುವೆ ಕುಸಿದಾಗ ಪ್ರಧಾನಿ ಮೋದಿ ಅವರಾಡಿದ್ದ ಮಾತುಗಳನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಸಿದ್ದಾರಮಯ್ಯ ಅವರು ಸೋಮವಾರ ತಿರುಗೇಟು ನೀಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕೋಲ್ಕೊತ್ತಾದ ಮೇಲುಸೇತುವೆ ಕುಸಿದು 27 ಮಂದಿ ಮೃತಪಟ್ಟಿದ್ದರು. ಈ ಘಟನೆ ಉಲ್ಲೇಖಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಇದು ಪಶ್ಚಿಮ ಬಂಗಾಳವನ್ನು ಟಿಎಂಸಿಯಿಂದ ಉಳಿಸಲು ದೇವರು ಕಳುಹಿಸಿದ್ದ ಸಂದೇಶ ಎಂದು ಹೇಳಿದ್ದರು.

ಪ್ರಧಾನಿ ಮೋದಿಯ ಹಳೆಯ ವಿಡಿಯೋ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಚುನಾವಣಾ ಕಾಲದಲ್ಲಿ ಕೋಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ,

ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ಪ್ರಧಾನಿ ನರೇಂದ್ರ ಮೋದಿ ಅವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT