ಸಾಂದರ್ಭಿಕ ಚಿತ್ರ 
ರಾಜಕೀಯ

ಬಿಜೆಪಿ ಜನೋತ್ಸವ ನಾಳೆ ನಡೆಯುತ್ತದೆಯೋ, ಇಲ್ಲವೋ: ಮುಖ್ಯಮಂತ್ರಿ ಬೊಮ್ಮಾಯಿ ನಿರ್ಧಾರದ ಮೇಲೆ ಅವಲಂಬಿತ!

ಕಳೆದ ಬಾರಿ ಹಿಂದೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಬಿಜೆಪಿಯ ಜನೋತ್ಸವ ಸಮಾವೇಶಕ್ಕೆ ಮತ್ತೆ ವಿಘ್ನ ಎದುರಾಗಿದೆ. 

ಬೆಂಗಳೂರು: ಕಳೆದ ಬಾರಿ ಹಿಂದೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಬಿಜೆಪಿಯ ಜನೋತ್ಸವ ಸಮಾವೇಶಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷವಾದ ಹಾಗೂ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷವಾದ ಹಿನ್ನೆಲೆಯಲ್ಲಿ ಮತ್ತು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ನಾಳೆ ಬಿಜೆಪಿಯಿಂದ ಜನೋತ್ಸವ ಕಾರ್ಯಕ್ರಮ ಏರ್ಪಾಡಾಗಿತ್ತು.

ಆದರೆ ಕಳೆದ ತಡರಾತ್ರಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿಯವರ ಹಠಾತ್ ನಿಧನ ಬಿಜೆಪಿ ಸರ್ಕಾರಕ್ಕೆ ಮತ್ತೆ ಶೋಕ ತಂದಿದೆ. ಈ ಸಮಯದಲ್ಲಿ ಸರ್ಕಾರ, ಬಿಜೆಪಿ ಜನೋತ್ಸವ ಮಾಡುತ್ತದೆಯೇ ಎಂಬ ಸಂಶಯದ ಮಾತುಗಳು ಕೇಳಿಬರುತ್ತಿವೆ. ಸರ್ಕಾರದ ಸಚಿವರು, ಮುಖ್ಯಮಂತ್ರಿಗಳ ಸಂಪುಟದ ಸಹೋದ್ಯೋಗಿ ನಿಧನರಾಗಿರುವುದು ಸೂತಕದ ಛಾಯೆ ಮಧ್ಯೆ ಸಮಾವೇಶ ಮಾಡುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿದೆ.

ಸಿಎಂ ನಿರ್ಧಾರಕ್ಕೆ ಬಿಟ್ಟದ್ದು: ಸಮಾವೇಶ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಕೆಲವೇ ಹೊತ್ತಿನಲ್ಲಿ ಸಿಎಂ ಅಂತಿಮ ತೀರ್ಮಾನ ಮಾಡಲಿದ್ದಾರೆ. ಸಿಎಂ ನಿರ್ಧಾರದ ಮೇಲೆ ನಾಳೆಯ ಬಿಜೆಪಿ ಜನೋತ್ಸವ ಅವಲಂಬಿತವಾಗಿದ್ದು, ಜನೋತ್ಸವ ಮುಂದೂಡಿಕೆ ಬಗ್ಗೆ ಬಿಜೆಪಿ ನಾಯಕರು ಮತ್ತು ಹಲವು ಸಚಿವರು ಒಲವು ಹೊಂದಿದ್ದಾರೆ. ಈಗಾಗಲೇ ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video