ಸಿದ್ದರಾಮಯ್ಯ 
ರಾಜಕೀಯ

ಸರ್ಕಾರದ ಸಾಧನೆ ಹೇಳಿಕೊಳ್ಳಲು ಏನಿದೆ, ಇದು ರಾಜಕೀಯ ಪ್ರೇರಿತ ಸಮಾವೇಶ: ಸಿದ್ದರಾಮಯ್ಯ ಟೀಕೆ

ಜನ ಸೇರಿಸಿಕೊಂಡು, ಹಣ ಖರ್ಚು ಮಾಡಿ ರಾಜಕೀಯ ಮಾಡಲು ಬಿಜೆಪಿಯವರು ಹೊರಟಿದ್ದಾರೆ ಎಂದು ದೊಡ್ಡಬಳ್ಳಾಪುರದ ಇಂದಿನ ಜನಸ್ಪಂದನ ಸಮಾವೇಶವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರ

ಬೆಂಗಳೂರು: ಪ್ರವಾಹದಲ್ಲಿ ಕಷ್ಟಕ್ಕೊಳಗಾಗಿರುವವರಿಗೆ ಸರ್ಕಾರ ಸ್ಪಂದಿಸಬೇಕು, ಬೆಂಗಳೂರಿನಲ್ಲಿ ಸೆಪ್ಟೆಂಬರ್ ಮಳೆಗೆ ಜನತೆ ಎಷ್ಟು ಕಷ್ಟಪಟ್ಟಿದ್ದಾರೆ ಎಂದು ನಾವೆಲ್ಲಾ ನೋಡಿದ್ದೇವೆ. ಅದನ್ನು ಬಿಟ್ಟು ಜನ ಸೇರಿಸಿಕೊಂಡು, ಹಣ ಖರ್ಚು ಮಾಡಿ ರಾಜಕೀಯ ಮಾಡಲು ಬಿಜೆಪಿಯವರು ಹೊರಟಿದ್ದಾರೆ ಎಂದು ದೊಡ್ಡಬಳ್ಳಾಪುರದ ಇಂದಿನ ಜನಸ್ಪಂದನ ಸಮಾವೇಶವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸುದ್ದಿಗಾರರು ಅವರ ಬಳಿ ಪ್ರತಿಕ್ರಿಯೆ ಕೇಳಿದಾಗ, ಇದು ರಾಜಕೀಯ ಪ್ರೇರಿತವಾದದ್ದು, ಜನರು ಕಷ್ಟದಲ್ಲಿದ್ದಾರೆ, ಬೆಂಗಳೂರಿನಲ್ಲಿ ಬೋಟ್ ನಲ್ಲಿ ಜನರು ಓಡಾಡಬೇಕಾದ ಪರಿಸ್ಥಿತಿ ಉಂಟಾಯಿತು. ಅವರ ಕಷ್ಟ-ಸುಖ ಕೇಳದೆ ಜನಸ್ಪಂದನೆ ಮಾಡಿ ಏನು ಪ್ರಯೋಜನ ಎಂದು ಕೇಳಿದರು.

ಯಾವ ಸಚಿವರೂ ಕ್ಷೇತ್ರಗಳಿಗೆ ಹೋಗುತ್ತಿಲ್ಲ, ಸರ್ಕಾರದ ಸಾಧನೆ ಹೇಳಲು ಮಾಡಿದ್ದು ಏನಿದೆ, ಭ್ರಷ್ಟಾಚಾರ ಬಗ್ಗೆ ಹೇಳಬೇಕಷ್ಟೆ ಎಂದು ಟೀಕಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT