ಡಿ.ಕೆ ಶಿವಕುಮಾರ್ 
ರಾಜಕೀಯ

ರಾಹುಲ್ ಗಾಂಧಿ ಯಾತ್ರೆಯಿಂದ 2023ರ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಉತ್ತೇಜನ: ಡಿಕೆ ಶಿವಕುಮಾರ್

2023ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವನ್ನು ಉತ್ತಮವಾಗಿ ಸಂಘಟಿಸಲು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಉತ್ತೇಜನ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ. 

ಮೈಸೂರು: 2023ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವನ್ನು ಉತ್ತಮವಾಗಿ ಸಂಘಟಿಸಲು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಉತ್ತೇಜನ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ. 

ಮೈಸೂರಿನಲ್ಲಿ ಯಾತ್ರೆಗೂ ಮುನ್ನ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ರಾಹುಲ್ ಗಾಂಧಿ ರಾಜ್ಯದ ಮನೆ ಬಾಗಿಲಿಗೆ ಬಂದಾಗ 10 ಸಾವಿರಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು. ಪಕ್ಷದ ಕಾರ್ಯಕರ್ತರು ಯಾತ್ರೆಗೆ ನೋಂದಾಯಿಸಿಕೊಳ್ಳಬೇಕು ಮತ್ತು ಪಕ್ಷವನ್ನು ತಳಮಟ್ಟದಿಂದ ಉತ್ತೇಜಿಸುವ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.

'ದಕ್ಷಿಣ ಪದವೀಧರ ಕ್ಷೇತ್ರ ಮತ್ತು ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ರಾಜ್ಯಾದ್ಯಂತ ಪ್ರಬಲ ಸಂದೇಶ ರವಾನಿಸಿದೆ. ಇದೇ ಗತಿಯನ್ನು ಪಕ್ಷ ಮುಂದುವರಿಸಬೇಕು ಮತ್ತು ಈ ಒಗ್ಗಟ್ಟು ಮಂಡ್ಯದ ಎಲ್ಲ ಸ್ಥಾನಗಳನ್ನು ಗೆಲ್ಲಲು ಸಹಕಾರಿಯಾಗಲಿದೆ ಎಂದರು.

ಇದೇ ವೇಳೆ ಹಿಂದಿನ ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನು ಸ್ಮರಿಸಿದ ಅವರು, ಈಗಿನ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಗುತ್ತಿಗೆದಾರರ ಸಂಘ ಬಯಲಿಗೆಳೆದಿದೆ ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ ನಿರ್ದೇಶನದ ಮೇರೆಗೆ ಮೇಕೆದಾಟು ಪಾದಯಾತ್ರೆಯನ್ನು ಯೋಜಿಸಿರುವ ಕೆಪಿಸಿಸಿ ಕೃಷ್ಣಾ ನದಿಯ ಕಡೆಗೆ ಮತ್ತೊಂದು ಪಾದಯಾತ್ರೆ ನಡೆಸಲು ಯೋಜಿಸಿದೆ ಎಂದು ಶಿವಕುಮಾರ್ ಮಾಹಿತಿ ನೀಡಿದರು. ಉದ್ದೇಶಿತ ಪಾದಯಾತ್ರೆಯಲ್ಲಿ ಕೆಲಸ ಮಾಡುವಂತೆ ಉತ್ತರ ಕರ್ನಾಟಕದ ನಾಯಕರಿಗೆ ಸೂಚಿಸಿದ್ದೇವೆ. ಬಿಜೆಪಿಯ ಜನಸ್ಪಂದನ ಯಾತ್ರೆಗೆ ಕಳಪೆ ಪ್ರತಿಕ್ರಿಯೆ ಕಂಡುಬಂದಿದೆ ಮತ್ತು ಖಾಲಿ ಕುರ್ಚಿಗಳು ಸ್ಪೀಕರ್‌ಗಳು ಅವರ ನಾಯಕರನ್ನು ಸ್ವಾಗತಿಸಿದವು ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT